ಬ್ಯಾಂಕಿನಲ್ಲಿ 3.50 ಲಕ್ಷ, 2.50 ಲಕ್ಷ ಕೈ ಸಾಲ: ರೈತ ನೇಣಿಗೆ ಶರಣು!

ವಿಜಯಪುರ: ಸಾಲಬಾಧೆಯಿಂದ ಮನನೊಂದು ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದ ರೈತ ಮಡ್ಡೆಪ್ಪ ಪೂಜಾರಿ(40) ಆತ್ಮಹತ್ಯೆಗೆ ಶರಣಾಗಿದ್ದಾರೆ. ತೊಗರಿ ಮತ್ತು ಹತ್ತಿ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾದ ಮಡ್ಡೆಪ್ಪ, ಮಾನಸಿಕವಾಗಿ ನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಲ್ಲದೇ ಮಡ್ಡೆಪ್ಪ ಅವರು ಗಬಸಾವಳಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ರೂ. 3.50 ಲಕ್ಷ ಹಾಗೂ 2.50 ಲಕ್ಷ ರೂ. ಕೈ ಸಾಲ ಮಾಡಿದ್ದರು. ಹೀಗಾಗಿ ಬೆಳೆಯೂ ಕೈಕೊಟ್ಟಿದ್ದರಿಂದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಎಂದು ಮಾನಸಿಕವಾಗಿ ನೊಂದು ಈ ನಿರ್ಧಾರ ತಗೆದುಕೊಂಡಿದ್ದಾರೆ ಅಂತ ಹೇಳಲಾಗುತ್ತಿದೆ.

ಘಟನೆ ಸಂಬಂಧ ಸಿಂದಗಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *