2 ವರ್ಷಗಳ ಹಿಂದೆ ಮದ್ವೆಯಾಗಿದ್ದ ಗೃಹಿಣಿ ನೇಣಿಗೆ ಶರಣು

ಬೆಂಗಳೂರು: ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ.

ರಮ್ಯಾ ಮೃತ ದುರ್ದೈವಿಯಾಗಿದ್ದು, ಈಕೆ ಎರಡು ವರ್ಷದ ಹಿಂದೆ ಮಂಜುನಾಥ್ ಎಂಬಾತನನ್ನು ವರಿಸಿದ್ದಳು. ಮದುವೆ ನಂತರ ಪ್ರತಿದಿನ ವರದಕ್ಷಿಣೆ ತರುವಂತೆ ಮಂಜುನಾಥ್ ಕಿರುಕುಳ ನೀಡುತ್ತಿದ್ದನು. ಇದರಿಂದ ನೊಂದ ರಮ್ಯಾ ನೇಣಿಗೆ ಶರಣಾಗಿದ್ದಾಳೆ ಎಂದು ರಮ್ಯಾ ಪೋಷಕರು ಆರೋಪಿಸುತ್ತಿದ್ದಾರೆ.

ಈ ಘಟನೆ ಬಳಿಕ ರಮ್ಯಾ ಪತಿ ಮನೆಯವರು ಪರಾರಿಯಾಗಿದ್ದಾರೆ. ಇತ್ತ ಮಗಳ ಸಾವಿನ ನ್ಯಾಯಕ್ಕಾಗಿ ಮನೆ ಮುಂದೆ ಶವವಿಟ್ಟು ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಪ್ರಕರಣ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments

Leave a Reply

Your email address will not be published. Required fields are marked *