ಶಾಲಾ ಬಸ್, ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿ ಜಖಂಗೊಂಡ್ರು ಪ್ರಯಾಣಿಕರೆಲ್ಲರೂ ಪಾರು!

ಬೆಂಗಳೂರು: ಶಾಲಾ ಬಸ್ ಮತ್ತು ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದ್ದಂತಾಗಿದೆ.

ಈ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ರಸ್ತೆಯ ವಿ ಕಲ್ಲಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ. ಶಾಲಾ ಬಸ್ ನಲ್ಲಿ ಸುಮಾರು ಹತ್ತು ಜನ ವಿದ್ಯಾರ್ಥಿಗಳು ಇದ್ದರು. ಟಾಟಾ ಸುಮೋದಲ್ಲಿ ನಾಲ್ವರು ಇದ್ದರು ಎನ್ನಲಾಗಿದೆ.

ಶಾಲಾ ಬಸ್ ಮತ್ತು ಟಾಟಾ ಸುಮೋ ಸರ್ಜಾಪುರ ರಸ್ತೆಯ ವಿ ಕಲ್ಲಹಳ್ಳಿ ಬಳಿ ಬರುತ್ತಿದ್ದಂತೆಯೇ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಸದ್ಯ ಈ ಘಟನೆಯಿಂದ ಯಾವುದೇ ಪ್ರಾಣಾಪಾಯವಿಲ್ಲ ಸಂಭವಿಸಿಲ್ಲ. ಎಲ್ಲರೂ ಭಾರೀ ಅನಾಹುತದಿಂದ ಪಾರಾಗಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಶಾಲಾ ಬಸ್ ಮತ್ತು ಟಾಟಾ ಸುಮೋ ಎರಡು ವಾಹನಗಳ ಮುಂಭಾಗ ಜಖಂ ಆಗಿವೆ.

Comments

Leave a Reply

Your email address will not be published. Required fields are marked *