ಭಾರೀ ಗಾಳಿ-ಮಳೆಗೆ ನೆಲಕಚ್ಚಿದ ಬಾಳೆ ಗಿಡಗಳು-ಸಂಕಷ್ಟದಲ್ಲಿ ರೈತ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಮುಂಗಾರು ಮಳೆಯ ಆರ್ಭಟಕ್ಕೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿದೆ.

ರಮೇಶ್ ಗಂಗನಗೌಡ, ಅಮರಪ್ಪ ಗಂಗನಗೌಡ, ತಿಪ್ಪಣ ಕೆಂಬಾವಿ, ರೇವಣಪ್ಪ ಕೆಂಬಾವಿ ಎಂಬವರ ಹೊಲಗಳಲ್ಲಿ ಮಳೆಯ ಹೊಡೆತಕ್ಕೆ ಒಟ್ಟು ನಾಲ್ಕು ಎಕರೆ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಭಾರೀ ಮಳೆ ಬಂದಿದ್ದರಿಂದ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ.

ರೈತರು ಸಾಲ ಮಾಡಿ ಬಾಳೆ ಬೆಳೆದಿದ್ದರು. ಭಾನುವಾರ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಬಾಳೆ ಗಿಡಗಳು ಮುರಿದು ಬಿದ್ದಿವೆ. ಗಿಡಗಳು ಬೀಳದಂತೆ ಮರದ ಕೋಲುಗಳನ್ನು ಕೊಟ್ಟಿದ್ದರು ಗಾಳಿ ಬೀಸಿದ್ದರಿಂದ ಬಿದ್ದಿವೆ. ಬಿದ್ದಿರುವ ಗಿಡಗಳಲ್ಲಿ ಇರುವ ಗೊನೆಗಳ ಕಾಯಿಗಳು ಇನ್ನೂ ಬಲಿತಿಲ್ಲ. ಸುಮಾರು 100 ಗಿಡಗಳು ಮುರಿದು ಬಿದ್ದಿವೆ ಎಂದು ರೈತ ಬಸಪ್ಪ ಹೇಳ್ತಾರೆ.

ರೈತರು ಲಕ್ಷಾಂತರ ರೂಪಾಯಿ ಬೆಲೆಯ ಬಾಳೆ ನೆಲಕ್ಕಚ್ಚಿದ್ದರಿಂದ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಮೊರೆ ಇಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *