ರೈಲಿಗೆ ಸಿಲುಕಿ ತಾಯಿ, ಮರಿಯಾನೆ ಸಾವು

ಮಂಗಳೂರು: ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡಾನೆ ಮತ್ತು ಮರಿ ಆನೆ ದುರ್ಮರಣಕ್ಕೀಡಾದ ಘಟನೆ ಶಿರಾಡಿಘಾಟ್‍ನ ಎಡಕುಮರಿ ಸಮೀಪದಲ್ಲಿ ನಡೆದಿದೆ.

ಮಂಗಳೂರು-ಬೆಂಗಳೂರು ರೈಲು ಮಾರ್ಗವು ಕಾಡಿನ ಮಧ್ಯದಲ್ಲಿಯೇ ಹಾದು ಹೋಗಿದ್ದು, ಸುಬ್ರಹ್ಮಣ್ಯ ರೋಡ್ ಹಾಗೂ ಸಕಲೇಶಪುರ ಮಧ್ಯದಲ್ಲಿರುವ ಎಡಕುಮರಿ ಸಮೀಪದಲ್ಲಿ ಈ ಘಟನೆ ನಡೆದಿದೆ. ತಾಯಿ ಆನೆ ಹಾಗೂ ಅದರ ಮರಿ ರೈಲು ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ, ಸ್ಥಳದಲ್ಲಿಯೇ ಮೃತಪಟ್ಟಿವೆ.

ಎಂದಿನಂತೆ ಸೋಮವಾರ ರೈಲ್ವೆ ಸಿಬ್ಬಂದಿ ಹಳಿಗಳ ಪರಿಶೀಲನೆ ನಡೆಸುವ ವೇಳೆ ಆನೆಗಳ ಮೃತ ದೇಹ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾನುವಾರ ತಡರಾತ್ರಿಯೇ ಘಟನೆ ನಡೆದಿದ್ದು, ರಾತ್ರಿ ಮಂಜಿನ ವಾತಾವರಣದಿಂದ ಲೊಕೊ ಪೈಲೆಟ್ ಗೆ (ರೈಲು ಚಾಲಕ) ಆನೆಗಳು ಹಳಿ ದಾಟುತ್ತಿರುವುದು ಕಾಣಿಸಿರಲಿಲ್ಲ. ಹೀಗಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *