ಕನ್ನಡ ಅಭಿಮಾನವಿಲ್ಲದ ಜಮೀರ್ ಕರ್ನಾಟಕದಿಂದ ತೊಲಗಲಿ: ಕನ್ನಡಿಗರ ಆಕ್ರೋಶ

ಬೆಂಗಳೂರು: ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ವಿರುದ್ಧ ಕನ್ನಡಿಗರು ಆಕ್ರೋಶಗೊಂಡಿದ್ದಾರೆ.

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರಸ್ ಶಾಸಕ ಜಮೀರ್ ಅಹ್ಮದ್ ನೂತನ ಸಚಿವರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಬದಲು ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರಿಂದ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಕಾಂಗ್ರೆಸ್ ಮತ್ತು ಜೆಡಿಎಸ್ ನ 25 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದು, ಅದರಲ್ಲಿ 24 ಶಾಸಕರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಸಚಿವ ಜಮೀರ್ ಅಹ್ಮದ್ ರನ್ನು ನಾಡದ್ರೋಹಿ. ಅವರಿಗೆ ಕನ್ನಡದ ಬಗ್ಗೆ ಯಾವ ಕಾಳಜಿಯು ಇಲ್ಲ, ಕರ್ನಾಟಕದಲ್ಲಿ ರಾಜಕಾರಣ ಮಾಡಲು ಯೋಗ್ಯರಲ್ಲ. ಕರ್ನಾಟಕದವರೇ ಆಗಿದ್ದು ಕನ್ನಡ ಅಭಿಮಾನವಿಲ್ಲದ ಜಮೀರ್ ರವರು ಕರ್ನಾಟಕದಿಂದ ತೊಲಗಲಿ ಎಂದು ಬರೆದು ಟೀಕಿಸಿದ್ದಾರೆ.

Comments

Leave a Reply

Your email address will not be published. Required fields are marked *