ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗೋದು ಬೇಡ: ಸಿ.ಎಸ್.ಪುಟ್ಟರಾಜು

ಮಂಡ್ಯ: ಖಾತೆ ಹಂಚಿಕೆಯಲ್ಲಿ ತಾರತಮ್ಯ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಗೊಂಡ ಬೆಂಬಲಿಗರಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಪತ್ರಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.

ನನಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗಬಾರದು, ಆದ್ದರಿಂದ ಪ್ರತಿಭಟನೆಯನ್ನು ಕೈಬಿಡಿ ಎಂದು ಪುಟ್ಟರಾಜು ಅವರು ಫೋನ್ ಮೂಲಕ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

ನಡೆದಿದ್ದು ಏನು?
ಜಿಲ್ಲೆಯಲ್ಲಿ ಪಕ್ಷಕ್ಕೆ ಏನು ಮಾಡದ ಡಿ.ಸಿ.ತಮ್ಮಣ್ಣಗೆ ಸಾರಿಗೆ ನೀಡಲಾಗಿದೆ. ಆದರೆ ಜಿಲ್ಲೆಯ ಜನತೆ ಹಾಗೂ ಪಕ್ಷಕ್ಕಾಗಿ ಶ್ರಮಿಸಿರುವ ಸಿ.ಎಸ್.ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಿ ತಾರತಮ್ಯ ತೊರಿದ್ದಾರೆ ಅಂತಾ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದರು. ಅಲ್ಲದೇ ಸಣ್ಣ ನೀರಾವರಿ ಖಾತೆ ಸಿಕ್ಕಿದ ಹಿನ್ನೆಲೆಯಲ್ಲಿ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿಯನ್ನು ಪಡೆಯಿರಿ ಎಂದು ಪುಟ್ಟರಾಜು ಅವರಿಗೆ ಬೆಂಬಲಿಗರು ಒತ್ತಾಯಿಸಿದ್ದರು.

ಇತ್ತ ಸಿ.ಎಸ್.ಪುಟ್ಟರಾಜು ಅವರು ಪಕ್ಷದ ಮುಖಂಡರ ಜೊತೆಗೆ ಮಾತುಕತೆಗೆ ಮುಂದಾಗದೇ ಸರ್ಕಾರಿ ಕಾರನ್ನು ವಾಪಸ್ ನೀಡಿ ಖಾಸಗಿ ಕಾರಿನಲ್ಲಿ ಚಾಲಕ, ಪತ್ನಿಯ ಜೊತೆ ಸ್ವಕ್ಷೇತ್ರದಿಂದ ಬೇರೆ ಕಡೆಗೆ ಪ್ರಯಾಣ ಬೆಳೆಸಿದ್ದರು. ಅಷ್ಟೇ ಅಲ್ಲದೇ ತಮ್ಮ ಮೊಬೈಲ್ ಫೋನನ್ನು ಸ್ವಿಚ್ ಆಫ್ ಮಾಡಿದ್ದರು.

Comments

Leave a Reply

Your email address will not be published. Required fields are marked *