ಟಿಂಬರ್ ಕೆಲಸಕ್ಕಾಗಿ ಆನೆಗಳನ್ನ ಹೊತ್ತೊಯ್ಯುತ್ತಿದ್ದ ಲಾರಿ ಸಹಿತ ಮಾವುತ ವಶಕ್ಕೆ!

ಚಿಕ್ಕಮಗಳೂರು: ಟಿಂಬರ್ ಕೆಲಸಕ್ಕಾಗಿ ಕೇರಳದಿಂದ ಚಿಕ್ಕಮಗಳೂರಿಗೆ ಲಾರಿಯಲ್ಲಿ ಸಾಗಿಸುತ್ತಿದ್ದ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಇಲ್ಲಿನ ಸೀತಾಳಯ್ಯನ ಗಿರಿ ಮಂಜುನಾಥ ಕಾಫಿ ತೋಟದಲ್ಲಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಲಾರಿಯಲ್ಲಿ ಆನೆಗಳನ್ನು ಸಾಗಿಸುತ್ತಿದ್ದ ವಿಚಾರವನ್ನು ಪರಿಸರವಾದಿ ಗಿರೀಶ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗಿರೀಶ್ ಅವರು ಮಾಹಿತಿ ಪಡೆದ ವಲಯ ಅರಣ್ಯಾಧಿಕಾರಿ(ಆರ್.ಎಫ್.ಓ) ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದ್ದು, ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಡು ಪ್ರಾಣಿಗಳನ್ನು ಯಾವುದೇ ಕೆಲಸಕ್ಕೆ ಬಳಸಬಾರದು ಎಂಬ ನಿಯಮದ ಹಿನ್ನೆಲೆ ಆನೆಗಳನ್ನು ವಶಕ್ಕೆ ಪಡೆಯಲಾಗಿದ್ದು, ತೋಟದ ಮಾಲೀಕರಿಂದ ನಿಯಮ ಬಾಹಿರ ಕೃತ್ಯ ನಡೆದಿದೆ. ಮಾವುತ ಹಾಗೂ ಲಾರಿ ಚಾಲಕ ವಿರುದ್ಧ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *