ತಾಕತ್ತಿದ್ದರೆ ರೈತರ ಸಾಲ ಮನ್ನಾ ಮಾಡಲಿ: ಕೇಂದ್ರ ಸರ್ಕಾರಕ್ಕೆ ಸಚಿವ ರೇವಣ್ಣ ಸವಾಲ್

ಹಾಸನ: ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಅವರು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ. ತಾಕತ್ತಿದ್ದರೆ ರೈತರ ಸಾಲಮನ್ನಾ ಮಾಡಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಸವಾಲು ಹಾಕಿದ್ದಾರೆ.

ಬೇಲೂರಿನ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿ ಚನ್ನಕೇಶವ ದೇವರ ಆಶೀರ್ವಾದ ಪಡೆದು ಮಾತನಾಡಿದ ಸಚಿವರು, ಕೇಂದ್ರ ಬಿಜೆಪಿ ಸರ್ಕಾರ ನಾಲ್ಕು ವರ್ಷದ ಅವಧಿಯಲ್ಲಿ ರೈತರಿಗೆ ಯಾವ ಸವಲತ್ತು ನೀಡಿದೆ ಎನ್ನುವುದನ್ನು ರಾಜ್ಯ ಬಿಜೆಪಿ ನಾಯಕರು ತಿಳಿಸಲಿ. ಬಿಜೆಪಿಯವರ ಆಡಳಿತದ ಬಗ್ಗೆ ದೇಶದ ಜನತೆಗೆ ಗೊತ್ತಿದೆ. ನಾನು ಅದರ ಬಗ್ಗೆ ತಿಳಿಸುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಚನ್ನಕೇಶವನ ಆಶೀರ್ವಾದದಿಂದ ಅಧಿಕಾರ ಸಿಕ್ಕಿದೆ. ಸರ್ಕಾರ ಇಷ್ಟೇ ದಿನವಿರುತ್ತದೆ ಅಂತಾ ನಾನು ಹೇಳುವುದಿಲ್ಲ. ಸರ್ಕಾರ ಇದ್ದಷ್ಟು ದಿನ ಅಭಿವೃದ್ಧಿ ಕೆಲಸ ಮಾಡುತ್ತೇನೆ. ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

Comments

Leave a Reply

Your email address will not be published. Required fields are marked *