ಬೈಕಿಗೆ ಐರಾವತ ಬಸ್ ಡಿಕ್ಕಿ- ತಲೆ ಜಜ್ಜಿಹೋಗಿದ್ದರಿಂದ ಪತ್ತೆಯಾಗಿಲ್ಲ ಯುವಕನ ಗುರುತು

ದಾವಣಗೆರೆ: ಬೈಕಿಗೆ ಹಿಂಬದಿಯಿಂದ ಕೆಎಸ್‍ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟಿ ಘಟನೆ ದಾವಣಗೆರೆ ಸಮೀಪದ ಹೊನ್ನೂರು ಗ್ರಾಮ ಬಳಿ ಈ ಘಟನೆ ಸಂಭವಿಸಿದೆ.

ಅಪಘಾತ ದಲ್ಲಿ ಸಾವನ್ನಪ್ಪಿದ ಯುವಕನ ತಲೆ ಸಂಪೂರ್ಣ ಜಜ್ಜಿದ್ದರಿಂದ ಗುರುತು ಪತ್ತೆಯಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ದಾವಣಗೆರೆ ಕಡೆ ಬರುತ್ತಿದ್ದ ಬೈಕ್ ಸವಾರನಿಗೆ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಐರಾವತ ಬಸ್ಸು ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ಸಂಪೂರ್ಣವಾಗಿ ಜಜ್ಜಿ ಹೋಗಿದ್ದು, ಇನ್ನು ಗುರುತು ಪತ್ತೆಯಾಗಿಲ್ಲ. ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

Comments

Leave a Reply

Your email address will not be published. Required fields are marked *