ಪಲ್ಟಿಯಾದ ಲಾರಿಯನ್ನು ಕ್ರೇನ್ ನಲ್ಲಿ ಎತ್ತಲು ಹೋಗಿ ಮತ್ತೆ ಪಲ್ಟಿ!

ಚಿಕ್ಕಮಗಳೂರು: ಮಳೆಯ ಅವಾಂತರಕ್ಕೆ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿದ್ದು, ಪರಿಣಾಮ ಶೃಂಗೇರಿ ಮತ್ತು ಚಿಕ್ಕಮಗಳೂರು ರಸ್ತೆ ಸಂಚಾರ ಕಡಿತಗೊಂಡಿತ್ತು.

ಚಿಕ್ಕಮಗಳೂರು ತಾಲೂಕಿನ ಎಲೆಕಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಪರಿಣಾಮ ಸುಮಾರು 2 ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಕಡಿತಗೊಂಡಿತ್ತು.

ಈ ಬಗ್ಗೆ ಮಾಹಿತಿ ತಿಳಿದ ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪಲ್ಟಿಯಾದ ಲಾರಿಯನ್ನು ಕ್ರೇನ್ ಮೂಲಕ ಎತ್ತಿ ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಕ್ರೇನ್ ನಲ್ಲಿ ಎತ್ತುವ ವೇಳೆ ಲಾರಿ ಕಾಫಿ ತೋಟಕ್ಕೆ ಹಿಂಬದಿ ಚಲಿಸಿ ಮತ್ತೆ ಪಲ್ಟಿಯಾಗಿದೆ.

ಈ ಅವಘಡದಿಂದ ಅದೃಷ್ಟವಶಾತ್ ಟಿಪ್ಪರ್ ಚಾಲಕ ಹಾಗೂ ಕಂಡಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Comments

Leave a Reply

Your email address will not be published. Required fields are marked *