ಆತ್ಮಹತ್ಯೆಗೆ ಯತ್ನಿಸಿ, ಲಾರಿಗೆ ಸಿಕ್ಕು ಎರಡೂ ಕಾಲು ಕಳೆದುಕೊಂಡ!

ಕೊಪ್ಪಳ: ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಲಾರಿಗೆ ಸಿಲುಕಿ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಕುಕನೂರು ಪಟ್ಟಣದ ಪ್ರವಾಸಿ ಮಂದಿರದ ಸಮೀಪದಲ್ಲಿ ನಡೆದಿದೆ.

ಕುಕನೂರು ಪಟ್ಟಣದ ಹುಸೇನ್ ಸಾಬ್ ಕುಷ್ಟಗಿ (30) ಆತ್ಮಹತ್ಯೆಗೆ ಯತ್ನಿಸಿ ಕಾಲುಗಳನ್ನು ಕಳೆದುಕೊಂಡ ವ್ಯಕ್ತಿ. ಅಪಘಾತವನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಅದೃಷ್ಟವಶಾತ್ ಹುಸೇನ್ ಬದುಕುಳಿದಿದ್ದು, ತನ್ನ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾನೆ.

ಹುಸೇನ್ ಸಾಬ್ ಮನೆಯಲ್ಲಿ ಜಗಳ ಮಾಡಿಕೊಂಡು ಹೊರ ಬಂದಿದ್ದ. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದ ಹುಸೇನ್ ಸಾಬ್ ಎದುರಿಗೆ ಬರುತ್ತಿದ್ದ ಲಾರಿಗೆ ಕೈ ಮುಗಿದು ಚಕ್ರಕ್ಕೆ ಬೀಳಲು ಯತ್ನಿಸಿದ್ದಾನೆ. ತಕ್ಷಣವೇ ಜಾಗೃತಗೊಂಡ ಚಾಲಕ ಎಷ್ಟೇ ಪ್ರಯತ್ನಿಸಿದರೂ ಲಾರಿ ನಿಯಂತ್ರಣಕ್ಕೆ ಸಿಗದೇ ಹುಸೇನ್ ಸಾಬ್ ಕಾಲುಗಳ ಮೇಲೆ ಹಾದು ಹೋಗಿದೆ. ಅತೀಯಾದ ರಕ್ತಸ್ರಾವದಿಂದ ಬಳಲುತ್ತಿದ್ದ ಹುಸೇಸ್ ಸಾಬ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *