ಪಾಲಿಕೆ ಅಧಿಕಾರಿಗಳ ವೇಷದಲ್ಲಿ ಬಂದು 280 ಗ್ರಾಂ ಚಿನ್ನಾಭರಣ, 8 ಸಾವಿರ ನಗದು ಕದ್ದು ಎಸ್ಕೇಪ್!

ಮೈಸೂರ: ಮಹಾನಗರ ಪಾಲಿಕೆಯ ಅಧಿಕಾರಿಗಳ ವೇಷದಲ್ಲಿ ಬಂದು ಮನೆಗಳ್ಳತನ ಮಾಡಿದ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ನಡೆದಿದೆ.

ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ಬಂದ ಇಬ್ಬರು ಖದೀಮರು ಮನೆಯೊಂದರಲ್ಲಿ ಕಳ್ಳತನ ಮಾಡಿದ್ದಾರೆ. ಲೀಲಾದೇವಿ ಎಂಬವರಿಗೆ ಸೇರಿದ ಮನೆಯಲ್ಲಿ ಚಿನ್ನದ ಓಲೆ, ಸರ ಹಾಗೂ ಉಂಗುರ ಸೇರದಂತೆ 280 ಗ್ರಾಂ ಚಿನ್ನಾಭರಣ ಹಾಗೂ 8 ಸಾವಿರ ರೂಪಾಯಿ ನಗದನ್ನು ಕದ್ದು ಪರಾರಿಯಾಗಿದ್ದಾರೆ.

ನಾವು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳೆಂದು ಹೇಳಿಕೊಂಡು ಮನೆಗೆ ಬಂದ ಕಳ್ಳರು ಮನೆ ಅಳತೆ ಮಾಡಿ ಆಸ್ತಿ ಕಾರ್ಡ್ ನೀಡುವುದಾಗಿ ಹೇಳಿದ್ದಾರೆ. ಇದಕ್ಕೆ ಒಪ್ಪಿದ ಲೀಲಾದೇವಿಯವರನ್ನು ನಂಬಿಸಿ ಹಣ, ಒಡವೆ ಕದ್ದು ಪರಾರಿಯಾಗಿದ್ದಾರೆ.

ಈ ಕುರಿತಂತೆ ಮನೆಯ ಮಾಲೀಕರಾದ ಲೀಲಾದೇವಿ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *