ಜಮೀರ್ ಕಾರ್ ಆಯ್ತು, ಈಗ ಸಿದ್ದರಾಮಯ್ಯ ನಿವಾಸಕ್ಕೆ ಪರಂ ಪಟ್ಟು!

ಬೆಂಗಳೂರು: ಈ ಹಿಂದೆ ಜಮೀರ್ ತಮಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ಬೇಕು ಎಂದು ಬೇಡಿಕೆ ಇಟ್ಟಿದ್ದರು. ಈಗ ಡಿಸಿಎಂ ಪರಮೇಶ್ವರ್ ಸಿದ್ದರಾಮಯ್ಯ ಅವರ ಮನೆ ಬೇಕು ಎಂದು ಪಟ್ಟು ಹಿಡಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಕಾರು ಬೇಕು ಎಂದಿದ್ದ ಜಮೀರ್ ಗೆ ಅವರ ಕಾರು ಕೊಡೋದಕ್ಕೆ ಆಗಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದರು. ಆದರೆ ಈಗ ಉಪ ಮುಖ್ಯಮಂತ್ರಿ ಪರಮೇಶ್ವರ್ ಬೆಂಗಳೂರಲ್ಲಿರುವ ಸಿದ್ದರಾಮಯ್ಯ ಇರುವ ಕಾವೇರಿ ನಿವಾಸವೇ ಬೇಕು ಎಂದು ಕೇಳಿದ್ದಾರೆ. ಇತ್ತ ಕ್ರೆಸೆಂಟ್ ರಸ್ತೆಯಲ್ಲಿನ ಹೆಚ್.ಕೆ.ಪಾಟೀಲ್ ನಿವಾಸ ಬೇಕೆಂದು ಡಿ.ಕೆ. ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಓದಿ: ಸಿದ್ದರಾಮಯ್ಯ ಅಂದ್ರೆ ನನಗಿಷ್ಟ, ಅವ್ರು ಬಳಸ್ತಿದ್ದ ಕಾರು ನಂಗೆ ಬೇಕೇ ಬೇಕು- ಜಮೀರ್ ಅಹ್ಮದ್ ಪಟ್ಟು

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಆ ಕಾರು ನನಗೆ ಬೇಕು. ಫಾರ್ಚೂನರ್ ಕಾರು ನನಗೆ ಕೊಡಿ ಎಂದು ಜಮೀರ್ ಅಹ್ಮದ್ ಡಿಪಿಎಆರ್ ಗೆ ಪತ್ರ ಬರೆದಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಂ- 01, ಜಿ 5734 ನಂಬರಿನ ಫಾರ್ಚೂನರ್ ಕಾರು ಬಳಸುತ್ತಿದ್ದರು. ಈಗ ಅದೇ ಕಾರು ಬೇಕು ಎಂದು ಜಮೀರ್ ಪಟ್ಟು ಹಿಡಿದಿದ್ದರು. ಜಮೀರ್ ಅಹ್ಮದ್ ಬೇಡಿಕೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡೋಂಟ್ ಕೇರ್ ಎಂದಿದ್ದರು. ಅಲ್ಲದೇ ಆ ಕಾರನ್ನು ಜಮೀರ್ ಗೆ ಕೊಡೋದು ಬೇಡ. ಆ ಕಾರನ್ನು ಯಾರಾದರೂ ಹಿರಿಯ ಮಂತ್ರಿಗಳಿಗೆ ಕೊಡೋಣ ಎಂದು ಹೆಚ್‍ಡಿಕೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದನ್ನು ಓದಿ: ಸಿದ್ದರಾಮಯ್ಯ ಕಾರು ನನಗ್ಯಾಕೆ ಬೇಕು: ಮಾಧ್ಯಮಗಳ ಮುಂದೆ ಕಾರಣ ಬಿಚ್ಚಿಟ್ಟ ಜಮೀರ್ ಅಹ್ಮದ್

Comments

Leave a Reply

Your email address will not be published. Required fields are marked *