ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆ ಕಂಡುಬಂದರೆ, ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು ಭಾಗ ಮಂಜಿನಿಂದ ಮುಚ್ಚಿಕೊಂಡಿದ್ದು, ಭಾರೀ ಮಳೆಯಿಂದಾಗಿ ತುಂಗಾ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.

Comments

Leave a Reply

Your email address will not be published. Required fields are marked *