ಎಟಿಎಂನಲ್ಲಿ ಹಣ ಕದಿಯಲು ಯತ್ನ- ಪೊಲೀಸರ ಕರ್ತವ್ಯ ಪ್ರಜ್ಞೆಯಿಂದ ತಪ್ಪಿದ ಕಳ್ಳತನ!

ವಿಜಯಪುರ: ಬೆಳಗಿನ ಜಾವ ಕಳ್ಳರು ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿ, ಪೊಲೀಸರನ್ನು ಕಂಡು ಪರಾರಿಯಾದ ಘಟನೆ ನಗರದ ಬಾಗಲಕೋಟೆ ರಸ್ತೆಯಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು 4ರ ಹೊತ್ತಿಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕಿನ ಎಟಿಎಂನಲ್ಲಿ ಹಣ ಕದಿಯಲು ಕಳ್ಳರು ಪ್ರಯತ್ನಿಸಿದ್ದಾರೆ. ಗ್ಯಾಸ್ ಕಟ್ಟರ್ ಸಹಾಯದಿಂದ ಎಟಿಎಂ ಕತ್ತರಿಸುತ್ತಿದ್ದಾಗ, ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದ ಗಾಂಧಿಚೌಕ್ ಠಾಣೆಯ ಎಎಸೈ ಪ್ರೇಮಾ ಕೂಚಬಾಳ ಕಣ್ಣಿಗೆ ಕದೀಮರು ಬಿದ್ದಿದ್ದಾರೆ. ಕೂಡಲೇ ಜಾಗೃತರಾದ ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಗ್ಯಾಸ್ ಕಟರ್ ಹಾಗೂ ಇತರೆ ವಸ್ತುಗಳು ಸಿಕ್ಕಿದ್ದು, ಕಳ್ಳರು ಕೆಎ 32 ಎಂ 4527 ಕಾರಿನಲ್ಲಿ ಪರಾರಿಯಾಗಿದ್ದಾರೆ. ಕದೀಮರನ್ನು ಬೆನ್ನತ್ತಿದ ಎಎಸೈ ಪ್ರೇಮಾರವರ ಕೈಗೆ ಸಿಗದೇ ಪರಾರಿಯಾಗಿದ್ದಾರೆ. ಐಸಿಐಸಿಐ ಎಟಿಎಂನಲ್ಲಿ ಹಣ ಸೇಫಾಗಿದ್ದು, ಘಟನೆ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *