ಕ್ಷುಲ್ಲಕ ಕಾರಣಕ್ಕೆ ಗಾರ್ಮೆಂಟ್ಸ್ ನಲ್ಲಿ ಮಹಿಳೆಯರಿಗೆ ಪ್ರತಿನಿತ್ಯ ಕಿರುಕುಳ!

ಚಾಮರಾಜನಗರ: ಗಾರ್ಮೆಂಟ್ಸ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯರಿಗೆ ಪ್ರತಿನಿತ್ಯ ಕಿರುಕುಳ ನೀಡುತ್ತಿರುವ ಘಟನೆ ಚಾಮರಾಜನಗರದಲ್ಲಿ ಜರುಗಿದೆ.

ಚಾಮರಾಜನಗರ ಹೊರವಲಯದಲ್ಲಿರುವ ಉತ್ತುವಳ್ಳಿ ಗಾರ್ಮೆಂಟ್ಸ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಗಲ ಗ್ರಾಮದ ಲಕ್ಷಮ್ಮ ಎಂಬ ಮಹಿಳೆಯ ಮೇಲೆ ಗಾರ್ಮೆಂಟ್ಸ್ ನ ಸೂಪರ್ ವೈಜರ್ ಹಲ್ಲೆ ಮಾಡಿರುವ ಆರೋಪಗಳು ಕೇಳಿಬಂದಿವೆ. ಬಟ್ಟೆ ಐರನ್ ಸರಿಯಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಮಹಿಳೆ ಮೇಲೆ ಗಾಜಿನ ಫ್ಯಾಟ್ರಾನ್ ನಲ್ಲಿ ಹಲ್ಲೆ ಮಾಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇದರಿಂದ ಮಹಿಳೆ ಕತ್ತಿಗೆ ಹಾಗೂ ಎದೆ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೇ ಗಾರ್ಮೆಂಟ್ಸ್ ನಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಕಾರಣಕ್ಕೆ ಮಹಿಳೆಯರ ಮೇಲೆ ಹಲ್ಲೆ ಹಾಗೂ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆರೋಪವನ್ನು ಸಹ ಮಾಡಲಾಗಿದೆ.

ಸದ್ಯ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *