ಲಾರಿ, ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ಐವರ ದುರ್ಮರಣ

ತುಮಕೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲಿ ಐವರು ಮೃತಪಟ್ಟ ಘಟನೆ ಜಿಲ್ಲೆಯ ಮಧುಗಿರಿ ಸಮೀಪದ ಕೆರೆಗಳ ಪಾಳ್ಯದಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ನಿವಾಸಿಗಳಾದ ಮುರುಳಿ (24), ಮಂಜುನಾಥ್ (20), ರಾಮ್ ಮೋಹನ್ (22), ಶಿವಪ್ರಸಾದ್ (23) ಹಾಗೂ ದಿನೇಶ್ (26) ಮೃತ ದುರ್ದೈವಿಗಳು.

ಮೃತರು ಪಾವಗಡದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು, ಕಾರಿನಲ್ಲಿ ಮರಳುತ್ತಿದ್ದರು. ಈ ವೇಳೆ ಮಧುಗಿರಿ ಸಮೀಪದ ಕೆರೆಗಳ ಪಾಳ್ಯದಲ್ಲಿ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಆಗಿದ್ದು, ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ.

ಕಾರಿನ ಮೇಲೆ ಲಾರಿ ಹರಿದ ಪರಿಣಾಮ, ಸಂಪೂರ್ಣವಾಗಿ ಜಖಂಗೊಂಡಿದೆ. ಹೀಗಾಗಿ ಲಾರಿಯಲ್ಲಿದ್ದ ಐವರ ದೇಹಗಳು ಗುರುತು ಸಿಗದಂತಾಗಿವೆ. ಘಟನೆಯು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *