ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಪರಶುರಾಮ್ ವಾಗ್ಮೋರೆ ಹಾಜರು

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಪೊಲೀಸ್ ಬಿಗಿ ಭದ್ರತೆಯಲ್ಲಿ ಹಾಜರು ಪಡಿಸಲಾಯಿತು.

ಜಿಲ್ಲೆಯ ಸಿಂಧಗಿ ಪಟ್ಟಣದಲ್ಲಿ 1 ಜನವರಿ, 2012 ರಂದು ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಶುರಾಮನನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಪರಶುರಾಮನನ್ನು ವಿಜಯಪುರ ಜಿಲ್ಲಾ ಒಂದನೇ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಗೀತಾ ಕೆ ಬಿ ಅವರ ಮುಂದೆ ಹಾಜರು ಪಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನ ಇದೇ ತಿಂಗಳ 16ಕ್ಕೆ ಮುಂದೂಡಿದರು.

ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆ ಐದನೇ ಆರೋಪಿಯಾಗಿದ್ದು, ಸದ್ಯಕ್ಕೆ ಆತನನ್ನು ದರ್ಗಾ ಜೈಲಿಗೆ ರವಾನಿಸಲಾಗಿದೆ. ಪರಶುರಾಮ್ ವಾಗ್ಮೋರೆಯನ್ನು ಎಸ್‍ಐಟಿ ತಂಡ ಕರೆ ತಂದಿದ್ದು, ಇಂದು ಮತ್ತೆ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆಗಳಿವೆ.

Comments

Leave a Reply

Your email address will not be published. Required fields are marked *