ಶಂಕಿತ ಡೆಂಘೀ ಜ್ವರಕ್ಕೆ ಬಾಲಕ ಬಲಿ!

ಗದಗ: ಶಂಕಿತ ಡೆಂಘೀ ಜ್ವರದಿಂದಾಗ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಅಭಿ ರಾಮಪ್ಪ ಮಾಳಗಿಮನೆ (7) ಮೃತ ಬಾಲಕನಾಗಿದ್ದು, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದನಾಗಿದ್ದಾನೆ. ಕಳೆದ ಒಂದು ವಾರದಿಂದ ತೀರ್ವ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಪೋಷಕರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಡೆಂಘೀ ಜ್ವರದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಮೃತಪಟ್ಟಿದ್ದಾನೆ.

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಡೆಂಘೀ ಜ್ವರ ಭೀತಿ ಹೆಚ್ಚಾಗಿದ್ದು, ಸಾರ್ವಜನಿಕರು ಡೆಂಘೀ ಜ್ವರದ ಕುರಿತು ಹೆಚ್ಚಿನ ಕಾಳಜಿ ವಹಿಸುವುದು ಅವಶ್ಯಕವಾಗಿದೆ.

Comments

Leave a Reply

Your email address will not be published. Required fields are marked *