ಬಾದಾಮಿ ಪ್ರವಾಸದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮೌನಕ್ಕೆ ಶರಣು

ಬಾಗಲಕೋಟೆ: ಬಾದಾಮಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಮೌನಕ್ಕೆ ಶರಣಾಗಿದ್ದು, ಮಾಧ್ಯಮಗಳು ಮಾತನಾಡಿಸಲು ಪ್ರಯತ್ನಿಸಿದಾಗ ನನಗೆ ಟೈಂ ಇಲ್ಲ ಬಿಟ್ಟು ಬಿಡಿ ಎಂದು ಕೇಳಿಕೊಂಡಿದ್ದಾರೆ.

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ನನಗೆ ಟೈಂ ಇಲ್ಲ ಬಿಟ್ಟು ಬಿಡಿ ಎಂದು ಕೇಳಿಕೊಂಡಿದ್ದಾರೆ.

ಬಾದಾಮಿ ತಾಲೂಕಿನ ಬಿ.ಎನ್.ಜಾಲಿಹಾಳ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದ ರೈತ ಸಣ್ಣಪ್ಪ ಹಾದಿಮನಿ ಮನೆಗೆ ಇಂದು ಭೇಟಿ ನೀಡಿದ್ದಾರೆ. ಮೃತ ರೈತನ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂಪಾಯಿಗಳ ಪರಿಹಾರದ ಚೆಕ್ ಅನ್ನು ವಿತರಿಸಿದ್ದಾರೆ.

ಭೇಟಿ ವೇಳೆ ಬಿ.ಎನ್.ಜಾಲಿಹಾಳ ಗ್ರಾಮದಲ್ಲಿ ತುಂಬಿ ತುಳಕುತ್ತಿರುವ ಗಲೀಜನ್ನು ಕಂಡು, ಚರಂಡಿ ಸ್ವಚ್ಛ ಮಾಡದ್ದಕ್ಕೆ ಪಟ್ಟದಕಲ್ಲು ಪಂಚಾಯತ್ ಪಿಡಿಒಗೆ ತರಾಟೆ ತೆಗೆದುಕೊಂಡಿದ್ದಾರೆ. ಮೊದಲು ಸ್ವಚ್ಛತೆಗೆ ಆದ್ಯತೆ ಕೊಡಬೇಕು, ಇಲ್ಲದಿದ್ದರೆ ಅಮಾನತು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *