ನಿಷೇಧದ ನಡುವೆಯೂ ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ!

ಹಾಸನ: ನಿಷೇಧದ ನಡುವೆಯೂ ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವಾಗುತ್ತಿದ್ದು, ಅಪಾಯಕಾರಿ ರಸ್ತೆಯಲ್ಲಿ ಆತಂಕದ ನಡುವೆ ಸಣ್ಣ ವಾಹನಗಳು ಸಂಚಾರ ಮಾಡುತ್ತಿದೆ.

ರಸ್ತೆ ದುರಸ್ಥಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಲಾರಿ, ಬಸ್ ಸೇರಿ ಭಾರಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬೃಹತ್ ವಾಹನಗಳನ್ನು ನಿಷೇಧಿಸಲಾಗಿತ್ತು. ಆದರೆ ಈಗ ನಿಷೇಧದ ನಡುವೆಯೂ ಭಾರೀ ವಾಹನ ಎಗ್ಗಿಲ್ಲದೆ ಸಂಚಾರ ಮಾಡುತ್ತಿದೆ.

ಕಾಂಕ್ರಿಟೀಕರಣಕ್ಕಾಗಿ ಕಳೆದ ಆರು ತಿಂಗಳಿನಿಂದ ವಾಹನ ಸಂಚಾರವನ್ನು ಸರ್ಕಾರ ನಿಷೇಧಿಸಿತ್ತು. ಬಳಿಕ ಜುಲೈ 15ರ ಬಳಿಕ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಆದರೆ ಲಘು ವಾಹನಗಳ ಜೊತೆ ಭಾರೀ ವಾಹನಗಳ ಸಂಚಾರದಿಂದ ಜನರಲ್ಲಿ ಆತಂಕ ಮೂಡಿದೆ. ಸದ್ಯ ಜನರು ಕಣ್ಮುಚ್ಚಿ ಕುಳಿತ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಕಳೆದ ಜನವರಿ 20 ರಿಂದ ಆರಂಭವಾಗಿದ್ದ 74 ಕೋಟಿ ರೂ. ವೆಚ್ಚ, 12.38 ಕಿಮೀ ಉದ್ದದ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದ್ದು, ಸಚಿವ ಹೆಚ್.ಡಿ.ರೇವಣ್ಣ ಜುಲೈ 15ರಂದು ವಾಸ್ತು ಪ್ರಕಾರ ಶಿರಾಡಿ ಘಾಟ್ ಉದ್ಘಾಟಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು.

Comments

Leave a Reply

Your email address will not be published. Required fields are marked *