ಕೊಪ್ಪಳದ ಅಪರ ಜಿಲ್ಲಾಧಿಕಾರಿ ನಾಪತ್ತೆ!

ಕೊಪ್ಪಳ: ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಮೇಲೆ ಹಲ್ಲೆ ಪ್ರಕರಣದಿಂದಾಗಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ನಾಪತ್ತೆಯಾಗಿದ್ದಾರೆ.

ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಕುಟುಂಬದವರು ಇದೇ ತಿಂಗಳು 3 ರಂದು ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ನಡೆದ ದಿನದಿಂದ ಅಪರ ಜಿಲ್ಲಾಧಿಕಾರಿಗಳು ಕಚೇರಿಯತ್ತ ಸುಳಿಯದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಳೆದ 20 ದಿನಗಳಿಂದ ರುದ್ರೇಶ್ ಘಾಳಿಯು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕಚೇರಿಗೆ ಬಾರದೇ ಇರುವುದರಿಂದ ಅವರ ಕೊಠಡಿಗೆ ಬೀಗ ಹಾಕಲಾಗಿದೆ. ಇನ್ನು ರುದ್ರೇಶ್ ಘಾಳಿಯವರು ದೀರ್ಘರಜೆಯ ಮೇಲೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಆದರೆ ಕೆಲವು ಮೂಲಗಳ ಪ್ರಕಾರ ರುದ್ರೇಶ್ ಘಾಳಿಯವರು ಕೊಪ್ಪಳದಿಂದ ಬೇರೆ ಕಡೆಗೆ ವರ್ಗಾವಣೆಯಾಗಲು ಬೆಂಗಳೂರಿನಲ್ಲೇ ಬೀಡುಬಿಟ್ಟಿದಾರೆಂಬ ಮಾತುಗಳು ಕೇಳಿಬಂದಿವೆ.

Comments

Leave a Reply

Your email address will not be published. Required fields are marked *