ಸುದೀಪ್‍ರನ್ನು ಭೇಟಿ ಮಾಡಿದ ಶಾಸಕ ಶ್ರೀರಾಮುಲು

ಬೆಂಗಳೂರು: ಇಂದು ಬಿಜೆಪಿ ಶಾಸಕ ಶ್ರೀರಾಮುಲು, ನಟ ಸದೀಪ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯುಳ್ಳ ಪುಸ್ತಕವನ್ನು ಸುದೀಪ್ ಅವರಿಗೆ ನೀಡಿದ್ದಾರೆ.

ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತೆರಳಿರುವ ಶ್ರೀರಾಮುಲು, ರಾಯಚೂರು ಅಥವಾ ಬಳ್ಳಾರಿ ಕ್ಷೇತ್ರದಿಂದ ನಿಲ್ಲುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಮತ್ತು ರಾಜುಗೌಡ ಪರವಾಗಿ ಪ್ರಚಾರ ಮಾಡಿದ್ರು. ಬಳ್ಳಾರಿ, ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹುಡುಕಾಟ ನಡೆಸಿದ್ದು, ಶ್ರೀರಾಮುಲು ಅವರು ಗೆಳೆಯ ಸುದೀಪ್ ಮುಂದೆ ಚುನಾವಣೆಗೆ ನಿಲ್ಲುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದಾರಂತೆ.

ಸುದೀಪ್ ಬಿಜೆಪಿ ನೀಡಿರುವ ಆಫರ್ ತಿರಸ್ಕರಿಸುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸುದೀಪ್ ಅವರಿಗೆ ಎಲ್ಲ ಪಕ್ಷಗಳಿಂದಲೂ ಟಿಕೆಟ್ ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ ಸುದೀಪ್ ರಾಜಕೀಯ ಪ್ರವೇಶಿಸಲು ಹಿಂದೇಟು ಹಾಕಿದ್ದರು.

ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ನಾಯಕರು ಹಿರಿಯ ಗಾಯಕಿ ಲತಾ ಮಂಗೇಶ್ಕರ್ ನಿವಾಸಕ್ಕೆ ತೆರಳಿ ಮೋದಿ ಸರ್ಕಾರದ ಸಾಧನೆಯ ಕಿರು ಹೊತ್ತಿಗೆಯನ್ನು ನೀಡಿ ಬಂದಿದ್ದರು. ಈ ಬಗ್ಗೆ ಲತಾ ಮಂಗೇಶ್ಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡಿಕೊಂಡು `ಎಲ್ಲ ನಾಯಕರನ್ನು ಭೇಟಿಯಾಗಿದ್ದು ಖುಷಿ ತಂದಿದೆ’ ಎಂದು ಬರೆದುಕೊಂಡಿದ್ದರು.

ಲೋಕಸಭಾ ಚುನಾವಣೆ ಪ್ರಚಾರದ ಕೆಲಸದಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರು ಈಗಾಗಲೇ ತೊಡಗಿಕೊಂಡಿದ್ದು, ನಟಿ, ನಟಿ, ಉದ್ಯಮಿಗಳಿಗೆ ಎನ್‍ಡಿಎ ಸರ್ಕಾರದ ಸಾಧನೆ ತಿಳಿಸುವ ಕಿರು ಹೊತ್ತಿಗೆಯನ್ನು ನೀಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *