ಅನ್ನಭಾಗ್ಯ ಯೋಜನೆ: ದೋಸ್ತಿಗೆ ತಿರುಗೇಟು ಕೊಟ್ಟ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿ 7 ಕೆಜಿ ನೀಡಲಾಗುತ್ತದೆ ಎಂದಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಜಮೀರ್ ಅಹ್ಮದ್ ಹೇಳಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಅಕ್ಕಿ ಕಡಿತದ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಬಳಿ ಚರ್ಚೆ ಮಾಡಬೇಕಿತ್ತು. ಆದರೆ ಹಾಗೇ ಮಾಡಲಿಲ್ಲ. ಹೀಗಾಗಿ ಹಿಂದಿನಂತೆ 7 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಮಂಗಳವಾರ ಹೇಳಿಕೆ ನೀಡಿದ್ದರು.

ಬಜೆಟ್‍ನಲ್ಲಿ ಕುಮಾರಸ್ವಾಮಿ ಅವರು ಅನ್ನಭಾಗ್ಯ ಯೋಜನೆಯ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಆದರೆ ಇದು ಸೂಕ್ತವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಜೊತೆಗೆ ಅಕ್ಕಿ ಕಡಿತ ಮಾಡದಂತೆ ಪತ್ರದ ಮೂಲಕ ಕುಮಾರಸ್ವಾಮಿಯವರಿಗೆ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದರು. ಆದರೆ, ಕುಮಾರಸ್ವಾಮಿ ಅವರು ಯಾವುದೇ ಒತ್ತಡಗಳಿಗೆ, ಮನವಿಗೆ ಬಗ್ಗದೇ ಅಕ್ಕಿಯ ಕಡಿತವನ್ನು ಹಿಂದಕ್ಕೆ ಪಡೆದಿರಲಿಲ್ಲ.

Comments

Leave a Reply

Your email address will not be published. Required fields are marked *