ಲಂಚ ನೀಡಲಿಲ್ಲವೆಂದು ರೋಗಿಗಳಿಗೆ ವೀಲ್‍ಚೇರ್ ನೀಡದ ಸಿಬ್ಬಂದಿ!

ಚಿಕ್ಕಮಗಳೂರು: ದಾನಿಗಳ ಹೆಸರಲ್ಲಿ ನಿರ್ಮಿಸಲಾಗಿರೋ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಸೌಲಭ್ಯಗಳಿಗೇನು ಕೊರತೆ ಇಲ್ಲ. ಆದರೆ ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಮಾತ್ರ ಮಾನವಿಯತೆಯ ಕೊರತೆ ಅಗಾಧವಾಗಿದೆ. ಇಲ್ಲಿನ ಸಿಬ್ಬಂದಿಗಳು ಲಂಚ ಕೇಳಿದ್ದಕ್ಕೆ ರೋಗಿಗಳ ಕಡೆಯವರು ಕೊಡಲಿಲ್ಲವೆಂದು ವೀಲ್ ಚೇರನ್ನೆ ಕೊಡದೆ ಅಮಾನವೀಯವಾಗಿ ವರ್ತಿಸಿದ್ದಾರೆ

ಆಸ್ಪತ್ರೆ ಸಿಬ್ಬಂದಿ ವೀಲ್ ಚೇರ್ ನೀಡದ ಹಿನ್ನೆಲೆಯಲ್ಲಿ ರೋಗಿಯನ್ನು ಕುಟುಂಬಸ್ಥರು ಎತ್ತಿಕೊಂಡು ವೈದ್ಯರ ಬಳಿ ಹೋಗುತ್ತಿದ್ದಾರೆ. ಸಿಬ್ಬಂದಿಗಳ ಈ ವರ್ತನೆಗೆ ಸಾರ್ವಜನಿಕರು ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸಲಿಗೆ ಜಿಲ್ಲಾಸ್ಪತ್ರೆಗೆ ಬರೋದೆ ಬಡ ರೋಗಿಗಳು. ಇಲ್ಲಿ ದಿನನಿತ್ಯ ಆಸ್ಪತ್ರೆ ಮೇಲಿನ ಆರೋಪಕ್ಕೆ ಪುಷ್ಟಿ ನೀಡುವಂತಹ ದೃಶ್ಯಗಳು ನಡೆಯುತ್ತಲೇ ಇರುತ್ತೆ. ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಯ ಸಂಬಂಧಿಗಳು ಅಂತಹ ವಿಡಿಯೋವನ್ನ ಸೆರೆ ಹಿಡಿಯುತ್ತಲೇ ಇರುತ್ತಾರೆ. ಇದೀಗ ಮಹಿಳೆಯನ್ನು ಎತ್ತಿಕೊಂಡು ಹೋಗುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ.

ಅನಾರೋಗ್ಯದಿಂದ ನರಳಾಡುತ್ತಿದ್ದ ಮಹಿಳೆಯನ್ನ ಸಂಬಂಧಿಕರೇ ಎತ್ತಿಕೊಂಡು ಡಾಕ್ಟರ್ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದಾರೆ. ಇಷ್ಟೆಲ್ಲಾ ನಡೆದರೂ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಮಾತ್ರ ತಮಗೇನು ಗೊತ್ತಿಲ್ಲದಂತಿದ್ದು, ನಮ್ಮ ಆಸ್ಪತ್ರೆಯಲ್ಲಿ ಅಂತಹ ಘಟನೆ ನಡೆದಿಲ್ಲ. ಕೂಡಲೇ ಕೂಲಂಕುಶವಾಗಿ ಪರಿಶೀಲಿಸಿ ಅವರ ವಿರುದ್ಧ ಕ್ರಮ ಕೈಗೊಳ್ತೇನೆ ಎಂದು ಹೇಳುತ್ತಾರೆ.

Comments

Leave a Reply

Your email address will not be published. Required fields are marked *