ಅವಮಾನ ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಚಿತ್ರದುರ್ಗ: ಮೇಲ್ವಿಚಾರಕರರಿಂದ ಪರೀಕ್ಷಾ ಕೊಠಡಿಯಲ್ಲಿ ಅವಮಾನದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಫಾರಂ ಹಾಸ್ಟೆಲ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿ ನಡೆದಿದೆ.

ಅನುರೂಪ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ನಿನ್ನೆ ಸಂಜೆ 6.30ರ ಸುಮಾರಿಗೆ ಹಾಸ್ಟೆಲ್ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅನುರೂಪ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹರಿಹರಪುರ ಗ್ರಾಮದ ನಿವಾಸಿಯಾಗಿದ್ದು, ಜಾನಕಿ, ರಾಮಮೂರ್ತಿ ಎಂಬವರ ಪುತ್ರಿ. ಅನುರೂಪ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದು, ಬಬ್ಬೂರು ತೋಟಗಾರಿಕಾ ಕಾಲೇಜ್‍ನಲ್ಲಿ ದ್ವಿತೀಯ ವರ್ಷದ ಆರ್ಟಿಕಲ್ಚರ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಪರೀಕ್ಷಾ ಕೊಠಡಿಯಲ್ಲಿ ಮೇಲ್ವಿಚಾರಕ ಬಸವಲಿಂಗಯ್ಯರವರು ಆಕೆಗೆ ಡೆಸ್ಕ್ ಮೇಲೆ ಪೆನ್ನಿನಲ್ಲಿ ಬರೆಯುತ್ತಿಯಾ ಗೊತ್ತಾಗಾಲ್ವ? ನೀನು ಅಧ್ಯಾಪಕರ ಮಗಳು ಎಂದು ಗದರಿದ್ದಾರೆ. ಇದರಿಂದ ಬೇಸರಗೊಂಡ ಅನುರೂಪ ಈ ಕೃತ್ಯ ಎಸಗಿದ್ದಾಳೆ.

ಈ ಬಗ್ಗೆ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *