ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ವಾಜಪೇಯಿ ಅವರಿಗೆ ಆದ ಗತಿಯೇ ಮೋದಿಗೂ ಬರಲಿದೆ – ಬಿಜೆಪಿ ಸಂಸದ

ದಾವಣಗೆರೆ: ಮಾಜಿ ಪ್ರಧಾನಿ ವಾಜಪೇಯಿ ಅವರು ಹಲವು ಅಭಿವೃದ್ಧಿಪರ ಕಾರ್ಯಗಳನ್ನು ಕೈಗೊಂಡರು ಬಳಿಕ ನಡೆದ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿತು. ಸದ್ಯ ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ವಾಜಪೇಯಿ ಅವರಿಗೆ ಆದ ಗತಿಯೇ ಮೋದಿಗೂ ಬರಲಿದೆ ಎಂದು ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ ಹೇಳಿದ್ದಾರೆ.

 

ನಗರದ ಜಿಎಂಐಟಿ ಕಾಲೇಜ್ ನಲ್ಲಿ ನಡೆದ ರಾಜ್ಯ ಮಹಿಳಾ ಮೋರ್ಚಾದ ಪ್ರಶಿಕ್ಷಣ ಶಿಬಿರದಲ್ಲಿ ಮಾತನಾಡಿದ ಅವರು, ವಾಜಪೇಯಿ ಅವರು ದೇಶದ ಜನತೆಗೆ ಸರ್ವ ಶಿಕ್ಷಣ ಅಭಿಯಾನ, ಗ್ರಾಮ ಸಡಕ್ ಯೋಜನೆಯಂತಹ ಅನೇಕ ಉತ್ತಮ ಯೋಜನೆಗಳನ್ನು ನೀಡಿದ್ದರು. ಆದರೆ ಮುಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿತು. ಸದ್ಯ ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ವಾಜಪೇಯಿ ಅವರಿಗೆ ಆದ ಗತಿಯೇ ಮೋದಿಗೂ ಬರಲಿದೆ ಎಂದರು.

ಮೋದಿ ಅವರು ದಿನದ 15 ಗಂಟೆ ಕಾರ್ಯನಿರ್ವಹಿಸುತ್ತಾರೆ. ಇದುವರೆಗೂ ಒಂದು ರಜೆಯನ್ನು ತೆಗೆದುಕೊಂಡಿಲ್ಲ. ಪ್ರಧಾನಿಗಳು ಘೋಷಣೆ ಮಾಡಿದ ಎಲ್ಲಾ ಕಾರ್ಯಗಳನ್ನು ಜಾರಿಗೆ ತಂದಿದ್ದಾರೆ. ಅಂತಹ ನಾಯಕರು ನಮಗೇ ಸಿಕ್ಕಿದ್ದಾರೆ. ಆದರೆ ಮೋದಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಇನ್ನು ಮಾಹಿತಿ ತಲುಪಿಲ್ಲ. ಈಗಲೂ ಮೋದಿ ಅವರು ಮಾಡಿದ ಕಾರ್ಯಗಳ ಬಗ್ಗೆ ಜನತೆ ಮಾಹಿತಿ ನೀಡದಿದ್ದರೆ ವಾಜಪೇಯಿ ಅವರಿಗೆ ಆದ ಗತಿಯೇ ಮೋದಿಯವರಿಗೂ ಆಗಲಿದೆ. ಅದ್ದರಿಂದ ಮೋದಿ ಸರ್ಕಾರದ ಸಾಧನೆ ಬಗ್ಗೆ ಜನತೆಗೆ ತಿಳಿಸಿ ಎಂದು ಸಲಹೆ ನೀಡಿದರು.

Comments

Leave a Reply

Your email address will not be published. Required fields are marked *