ಬಂಡೀಪುರದಲ್ಲಿ ರಸ್ತೆ ನಿರ್ಮಾಣ ಮಾಡಿ ಅನ್ನೋದಕ್ಕೆ ನಾನ್ಯಾರು: ಸಚಿವ ರೇವಣ್ಣ ಪ್ರಶ್ನೆ

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರಗೆ ಹೇರಿದ ನಿಷೇಧವನ್ನು ತೆರವುಗೊಳಿಸುವ ಬಗ್ಗೆ ಮುಖ್ಯ ಕಾರ್ಯದರ್ಶಿಯನ್ನೇ ಕೇಳಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗರಂ ಆಗಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಂಡೀಪುರ ಅರಣ್ಯ ಪ್ರದೇಶದ ಕುರಿತಾಗಿ ಸರ್ಕಾರದ ನಿರ್ಧಾರ ಏನು ಎಂದು ಪ್ರಶ್ನಿಸಿದಕ್ಕೆ ಸಿಡಿಮಿಡಿಗೊಂಡ ಅವರು, ಸುಪ್ರೀಂ ಕೋರ್ಟ್ ನಿಂದ ಆದೇಶ ಹೊರ ಬರದೇ ನಾನು ವೈಯಕ್ತಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಮ್ಮ ಹಿಂದಿನ ಹೇಳಿಯನ್ನು ಮುಚ್ಚಿಹಾಕಲು ಪ್ರಯತ್ನಿಸಿದರು.

ಸುಪ್ರೀಂ ಕೋರ್ಟ್, ಅರಣ್ಯ ಹಾಗೂ ಪರಿಸರ ಇಲಾಖೆ ಸೇರಿ ಒಪ್ಪಿಗೆ ನೀಡದೇ ನಾನು ಒಪ್ಪಿಕೊಂಡರೆ ಸಮಸ್ಯೆ ಇತ್ಯರ್ಥ ಆಗುವುದಿಲ್ಲ. ನಾನು ಹೀಗೆ ತೀರ್ಪು ನೀಡಿ ಅಂತಾ ಸುಪ್ರೀಂ ಕೋರ್ಟ್ ಗೆ ಹೇಳಲು ಬರುವುದಿಲ್ಲ. ರಸ್ತೆ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಕೊಟ್ಟರೆ ಬೇಡ ಅಂತಾ ಹೇಳುವುದಕ್ಕೆ ನಾನು ಯಾರು? ಆದರೆ ಪತ್ರದ ಬಗ್ಗೆ ನನಗೆ ಕೇಳಬೇಡಿ, ಮುಖ್ಯ ಕಾರ್ಯದರ್ಶಿಗಳನ್ನು ವಿಚಾರಿಸಿ ಎಂದು ಹೇಳಿದರು.

ಸುದ್ದಿಗೋಷ್ಠಿ ಮುಕ್ತಾಯದವರೆಗೂ ಮಾಧ್ಯಮಗಳ ಪ್ರಶ್ನೆಗಳಿಗೆ, ನಾನ್ಯಾರು ಅದನ್ನು ಹೇಳುವುದಕ್ಕೆ? ನಾನು ಹೇಗೆ ಹೇಳೋದು ಎಂದು ಪ್ರಶ್ನಾರ್ಥಕ ಉತ್ತರಗಳನ್ನು ನೀಡುತ್ತಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

 

 

Comments

Leave a Reply

Your email address will not be published. Required fields are marked *