ಮೀಟರ್ ಬಡ್ಡಿವ್ಯವಹಾರ ಮಾಡುತ್ತಾ ಶಾಲೆಗೆ ಬಾರದ ಶಿಕ್ಷಕನ ವಿರುದ್ಧ ಪ್ರತಿಭಟನೆ!

ಕೋಲಾರ: ಮೀಟರ್ ಬಡ್ಡಿವ್ಯವಹಾರ ಮಾಡಿಕೊಂಡು ಶಾಲೆಗೆ ಬಾರದ ಶಿಕ್ಷಕನನ್ನು ವರ್ಗಾವಣೆ ಮಾಡಿ, ಬೇರೆ ಶಿಕ್ಷರನ್ನು ನೇಮಿಸುವಂತೆ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕೋಲಾರ ತಾಲೂಕಿನ ನಂದಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಂಜುಂಡಗೌಡ, ಊರಿನಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದು, ಶಾಲೆಗೆ ಸರಿಯಾಗಿ ಹಾಜರಾಗುತ್ತಿಲ್ಲ. ಅಲ್ಲದೇ ಕಳೆದ 5 ವರ್ಷಗಳಿಂದಲೂ ಶಿಕ್ಷಕ ಶಾಲೆಗೆ ಸರಿಯಾಗಿ ಬಾರದೆ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಯಲ್ಲಿ ಸುಮಾರು 70 ಮಕ್ಕಳು ಕಲಿಯುತ್ತಿದ್ದು, ಶಿಕ್ಷಕನ ವರ್ತನೆಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಹೈರಾಣಾಗಿದ್ದಾರೆ. ಅಲ್ಲದೇ ಇದನ್ನು ಪ್ರಶ್ನಿಸುವ ಸಹ ಶಿಕ್ಷಕರ ಮೇಲೆಯೂ ರಾಜಕೀಯ ಪ್ರಭಾವ ಬಳಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಶಿಕ್ಷಕನ ವರ್ತನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಶಿಕ್ಷಕನನ್ನು ಕೂಡಲೇ ವರ್ಗಾವಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *