ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಅಭಿಮಾನಿ ಆತ್ಮಹತ್ಯೆ

ಹೈದರಾಬಾದ್: ತನ್ನ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಮಾಡಬೇಕು ಎನ್ನುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದರೆ ಪವನ್‍ ಕಲ್ಯಾಣ್‍ರನ್ನು ಭೇಟಿ ಮಾಡೋಕೆ ಸಾಧ್ಯವಾಗದ ಕಾರಣ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅನಿಲ್‍ಕುಮಾರ್ ನಟ ಪವನ್‍ಕಲ್ಯಾಣ್ ಅವರ ಅಪ್ಪಟ ಅಭಿಮಾನಿ. ಅನಿಲ್ ಕುಮಾರ್ ಒಮ್ಮೆಯಾದರೂ ತನ್ನ ನೆಚ್ಚಿನ ನಟ ಪವನ್ ಕಲ್ಯಾಣ್ ಅವರನ್ನು ನೇರವಾಗಿ ಭೇಟಿ ಆಗಬೇಕೆಂದು ಆಸೆಯನ್ನು ಹೊಂದಿದ್ದ. ಸಾಕಷ್ಟು ಬಾರಿ ಭೇಟಿ ಮಾಡಲಿಕ್ಕೆ ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ.

ಹೀಗಾಗಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ. ಅಂತಿಮ ಸಂಸ್ಕಾರಕ್ಕೆ ಪವನ್‍ಕಲ್ಯಾಣ್ ಬರಬೇಕೆಂದು ಡೆತ್‍ನೋಟ್‍ನಲ್ಲಿ ಬರೆದಿಟ್ಟಿದ್ದಾನೆ. ಸದ್ಯ ಈ ಬಗ್ಗೆ ಸತ್ಯನಾರಾಯಣಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *