ತುಮಕೂರು: ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನೀತಿಗೆಟ್ಟು ರಾಜಕಾರಣ ಮಾಡಿ ಸಮಾಜವನ್ನು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಸ್ವ-ಪಕ್ಷೀಯ ಸೇರಿದಂತೆ ಎಲ್ಲಾ ಪಕ್ಷಗಳ ವಿರುದ್ಧ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ನೀತಿಗೆಟ್ಟು ರಾಜಕಾರಣ ಮಾಡುತ್ತಿದ್ದಾರೆ. ಈ ಮೂರು ಕೂಟದ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕು. ದೇಶಕ್ಕಾಗಿ ರಾಜ್ಯಕ್ಕಾಗಿ ತ್ಯಾಗ ಬಲಿದಾನ ಇಲ್ಲದೇ ಇದ್ದವರು, ಅಧಿಕಾರಕ್ಕಾಗಿ ಹೊಡೆದಾಟ ಮಾಡಿಕೊಳ್ಳುತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು ತ್ಯಾಗ ಬಲಿದಾನ ಮಾಡಿದ್ದಾರೆ. ನಾನು ಅವರ ಬಗ್ಗೆ ಏನೂ ಹೇಳುವುದಿಲ್ಲ. ಆಪರೇಷನ್ ಕಮಲಕ್ಕೆ ನಾನು ವಿರೋಧಿ. ಆ ರೀತಿ ಮಾಡುವುದು ಒಂದು ನೀತಿಗೆಟ್ಟ ರಾಜಕಾರಣ. ಒಂದು ವೇಳೆ ಕೇಂದ್ರದಲ್ಲಿ ಮಾಜಿ ಪ್ರಧಾನಿ ಅಟಲ್ ಜೀಯವರು ಇದೇ ರೀತಿ ತಂತ್ರ ಮಾಡಿ ಅಧಿಕಾರ ಪಡೆಯಬಹುದಿತ್ತು. ಆದರೆ ಅವರು ಎಂದಿಗೂ ಆ ರೀತಿ ಮಾಡಿಲ್ಲ. ಅವರು ತಮ್ಮ ಅವಧಿಯಲ್ಲಿ ನೀತಿಗೆಟ್ಟ ರಾಜಕಾರಣ ಎಂದೆನಿಸಿಕೊಂಡಿಲ್ಲ. ಹಾಗಾಗಿಯೇ ಪಕ್ಷಾತೀತವಾಗಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು ಎಂದು ಹೇಳಿದರು.
ನಾನು ಪಕ್ಷ ವಿರೋಧಿ ಹೇಳಿಕೆ ನೀಡಿದ್ದೆದ್ದಕ್ಕೆ ಯಾರ ಕೆಂಗಣ್ಣಿಗೂ ಹೆದರಲ್ಲ. ನನ್ನನ್ನು ಶೂಟ್ ಮಾಡಿದರು ಸಹ ನಾನು ಗುಂಡಿಗೆ ಎದೆ ಕೊಟ್ಟು ನಿಲ್ಲುತ್ತೇನೆ. ಯಾರ ಭಯವು ನನಗಿಲ್ಲ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply