ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಕಣಕ್ಕೆ- ಎಚ್‍ಡಿಡಿ

ವಿಜಯಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಅಭ್ಯರ್ಥಿಯಾಗಲು ಒಪ್ಪದೇ ಇದ್ದರೆ ಕಾಂಗ್ರೆಸ್ ಜೊತೆ ಚರ್ಚೆ ಮಾಡಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುತ್ತದೆ ಅಂದ್ರು.

ಮಂಡ್ಯ ಉಪ ಚುನಾವಣೆಯಲ್ಲಿ ಮೊಮ್ಮಕಳ್ಳನ್ನ ಕಣಕ್ಕೆ ಇಳಿಸಲ್ಲ. ಮಂಡ್ಯದಲ್ಲಿ ಸ್ಥಳಿಯರಿಗೆ ಅವಕಾಶ ಮಾಡಿ ಕೊಡಲಾಗುತ್ತದೆ. ರಾಜ್ಯದಲ್ಲಿ ನಡೆಯುವ ಐದು ಉಪ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಒಗ್ಗಟ್ಟಾಗಿ ಹೋಗಿ ಚುನಾವಣೆ ಎದುರಿಸುತ್ತೇವೆ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡುರಾವ್ ಜೊತೆ ಚರ್ಚಿಸಲಾಗಿದೆ ಅಂತ ಹೇಳಿದ್ರು.

ಬಳ್ಳಾರಿಯಲ್ಲಿ ಕಾಂಗ್ರೆಸ್ ಜೊತೆ ಚರ್ಚಿಸಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುತ್ತದೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಅಂತ ಅವರು ಸ್ಪಷ್ಟಪಡಿಸಿದ್ರು.

ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಅವರಿಂದ ತೆರವಾಗಿರುವ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದ್ದು, ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *