ಬಿಜೆಪಿ ಉದ್ಧಟತನ ಕಡಿಮೆ ಮಾಡಿದರೆ ಒಳಿತು: ಸಿಎಂ ಎಚ್‍ಡಿಕೆ

ಬೆಂಗಳೂರು: ಉಪಚುನಾವಣೆಯಲ್ಲಿ ಪಡೆಯುವ ಫಲಿತಾಂಶದಿಂದ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಮಾತನಾಡಿರುವ ಬಿಜೆಪಿ ಮುಖಂಡರ ಉದ್ಧಟತನ ಕಡಿಮೆ ಮಾಡಿಕೊಳ್ಳಬೇಕು ಎಂದು ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಫಲಿತಾಂಶ ಪ್ರಕಟವಾಗುತ್ತಿರುವ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ರಾಮನಗರ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರ ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಉಪಚುನಾವಣೆಯಲ್ಲಿ ನಮಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ ಇಂದು ರಾಜ್ಯದ ಜನತೆ ನೀಡಿರುವ ಮತಗಳ ಅಂತರ ನನಗೆ ಹೆಚ್ಚು ಉತ್ಸಾವನ್ನು ನೀಡಿದೆ. ಜನತೆಗೆ ಮೈತ್ರಿ ಸರ್ಕಾರದ ಮೇಲೆ ನಂಬಿಕೆ ಇದೆ ಎಂದು ದೃಢವಾಗಿದೆ. ಬಳ್ಳಾರಿ, ಮಂಡ್ಯ, ಜಮಖಂಡಿಯಲ್ಲಿ ಕ್ಷೇತ್ರದ ಅಭ್ಯರ್ಥಿಗಳು ಪಡೆದ ಮತಗಳ ಅಂತರ ನನಗೆ ಹೆಮ್ಮೆ ತಂದಿದೆ ಎಂದರು.

ಉಪಚುನಾವಣೆಯಲ್ಲಿ ಗೆಲುವಿಗೆ ಬಿಜೆಪಿ ಸರ್ಕಾರ ಉರುಳಿಸಲು ಮಾಡಿದ ಪ್ರಯತ್ನ ಹಾಗೂ ಕಾಂಗ್ರೆಸ್, ಜೆಡಿಎಸ್ ಮೈತ್ರಿಯಲ್ಲಿ ಉಂಟಾಗಿರುವ ಗಟ್ಟಿತನವೇ ಕಾರಣ. ಆದರೆ ಈ ಫಲಿತಾಂಶದಿಂದ ಮುಂದಿನ 2019ರ ಲೋಕಸಭಾ ಚುನಾವಣೆಗೆ ನಮಗೆ ಮತ್ತಷ್ಟು ಎಚ್ಚರವಾಗಿರುವಂತೆ ಮಾಡಿದೆ. ಸರ್ಕಾರ ಮತ್ತಷ್ಟು ಯೋಜನೆಗಳನ್ನು ಜನತೆಯ ಬಳಿ ತೆಗೆದುಕೊಂಡು ಹೋಗಿ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಯನ್ನು ಅಭಿವೃದ್ಧಿ ಕರೆ ಕೊಂಡ್ಯೊಯಲಾಗುತ್ತದೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Comments

Leave a Reply

Your email address will not be published. Required fields are marked *