ಪವನ್ ಕಲ್ಯಾಣ್ ಬಣ್ಣದ ಲೋಕಕ್ಕೆ ವಿದಾಯ

ಹೈದರಾಬಾದ್: ತೆಲುಗಿನ ಪ್ರಖ್ಯಾತ ನಟ ಪವನ್ ಕಲ್ಯಾಣ್ ಅವರು ತಮ್ಮ ಬಣ್ಣದ ಲೋಕಕ್ಕೆ ವಿದಾಯ ಹೇಳಿದ್ದಾರೆ.

ಪವನ್ ಕಲ್ಯಾಣ್ ಅವರು ಮುಂದಿನ ಚಿತ್ರದ ಬಗ್ಗೆ ಸಾಕಷ್ಟು ಗಾಸಿಪ್ ಗಳು ಹರಿದಾಡಿದ್ದು, ಇದೀಗ ಮುಂದಿನ ಚಿತ್ರಕ್ಕೆ ಸಹಿ ಮಾಡಿಲ್ಲ ಅಂತ ಹೇಳುವ ಮೂಲಕ ಊಹಾಪೋಹಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಒಂದು ಪತ್ರವನ್ನು ಪೋಸ್ಟ್ ಮಾಡಿರುವ ನಟ, ನಾನು ಒಂದು ಚಿತ್ರಕ್ಕೆ ಸಹಿ ಮಾಡಿರುವುದಾಗಿ ಸುದ್ದಿ ಹರಿದಾಡುತ್ತಿದೆ. ಆದ್ರೆ ಇದು ಶುದ್ಧ ಸುಳ್ಳಾಗಿದೆ. ನನಗೆ ಸಿನಿಮಾದಲ್ಲಿ ನಟಿಸಲು ಸಮಯವಿಲ್ಲ. ಹೀಗಾಗಿ ನಾನು ಯಾವುದೇ ಚಿತ್ರದಲ್ಲಿ ನಟನೆ ಮಾಡುವುದಿಲ್ಲ. ಬದಲಾಗಿ ನನ್ನನ್ನು ನಾನು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತಿದ್ದೇನೆ. ನನ್ನ ಉಳಿದ ಜೀವನ ಜನರ ಸೇವೆಗೆ ಮುಡಿಪು ಎಂದು ಗಬ್ಬರ್ ಸಿಂಗ್ ಪವನ್ ಕಲ್ಯಾಣ್ ಹೇಳಿದ್ದಾರೆ.

ಖುಷಿ, ಅತ್ತಾರಿಂಟಿಕಿ ದಾರೇದಿ, ಗಬ್ಬರ್ ಸಿಂಗ್ ಸಿನಿಮಾಗಳ ಮೂಲಕ ಮನೆ ಮಾತಾಗಿದ್ದ ನಟ, 2014ರಿಂದ ಜನಸೇನಾ ಪಕ್ಷದ ಮೂಲಕ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *