ಬ್ಯಾಂಕ್ ಅಧಿಕಾರಿ ಕೊಲೆಗೈದು, 10 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಪಾಟ್ನಾ: ದುಷ್ಕರ್ಮಿಗಳ ತಂಡವೊಂದು ಬ್ಯಾಂಕ್ ಅಧಿಕಾರಿಯೊಬ್ಬರನ್ನು ಗುಂಡಿಟ್ಟು ಕೊಂದು 10 ಲಕ್ಷ ರೂಪಾಯಿ ದೋಚಿ ಪರಾರಿಯಾಗಿರುವ ಘಟನೆ ಬಿಹಾರ್ ರಾಜ್ಯದ ಕಟಿಹಾರ್ ಜಿಲ್ಲೆಯಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ ಕಟಿಹಾರ್ ಜಿಲ್ಲೆಯ ಅಮೀನ್ ಚೌಕ್ ಪ್ರದೇಶದಲ್ಲಿರುವ ಬಂಧನ್ ಬ್ಯಾಂಕ್ ಶಾಖೆಗೆ ದುಷ್ಕರ್ಮಿಗಳು ನುಗ್ಗಿದ್ದಾರೆ. ಈ ವೇಳೆ ಬ್ಯಾಂಕಿನಲ್ಲಿದ್ದ ಸಿಬ್ಬಂದಿಯನ್ನು ಹೆದರಿಸಿ ಹಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳನ್ನು ತಡೆಯಲು ಮುಂದಾದ ಬ್ಯಾಂಕ್ ಅಧಿಕಾರಿಯೊಬ್ಬರಿಗೆ ಗುಂಡಿಟ್ಟಿ ಕೊಂದಿದ್ದಾರೆ. ಅಲ್ಲದೇ ಮತ್ತೋರ್ವ ಬ್ಯಾಂಕ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾರೆ.

ಬಳಿಕ ಬ್ಯಾಂಕಿನಲ್ಲಿದ್ದ 10 ಲಕ್ಷ ರೂಪಾಯಿಯನ್ನು ದೋಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬ್ಯಾಂಕ್ ಸಿಬ್ಬಂದಿಯನ್ನು ಪೂರ್ನಿಯ ಬಳಿಯಿರುವ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ವ್ಯಾಪಕ ಶೋಧ ನಡೆಸಿದ್ದಾರೆ. ಘಟನೆ ಸಂಬಂಧ ಪೊತಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *