ಆರತಕ್ಷತೆ ಬಳಿಕ ದೇಶದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ಕೊಟ್ಟ ದೀಪ್‍ವೀರ್!

ಮುಂಬೈ: ಬಾಲಿವುಡ್‍ನ ಕ್ಯೂಟ್ ಕಪಲ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಕುಟುಂಬಸ್ಥರೊಂದಿಗೆ ಶುಕ್ರವಾರದಂದು ನಗರದ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುವ ವೇಳೆ ದೀಪಿಕಾ ಹಾಗೂ ರಣ್‍ವೀರ್ ಇಬ್ಬರು ಮ್ಯಾಚಿಂಗ್ ಬಣ್ಣದ ಉಡುಪನ್ನು ಧರಿಸಿದ್ದರು. ಒಂದೆಡೆ ರಣ್‍ವೀರ್ ಪೈಜಾಮ- ಕುರ್ತಾ ಜೊತೆ ನೆಹರು ಜಾಕೆಟ್ ಧರಿಸಿದ್ದರೆ, ಇನ್ನೊಂದೆಡೆ ದೀಪಿಕಾ ಲಾಂಗ್ ಕುರ್ತಾ ಜೊತೆ ಡಿಸೈನರ್ ದುಪ್ಪಟ್ಟಾದಲ್ಲಿ ಎಲ್ಲರ ಗಮನ ಸೆಳೆದರು.

ಸಿದ್ಧಿವಿನಾಯಕನ ದರ್ಶನ ಪಡೆದ ನಂತರ ಅಭಿಮಾನಿಗಳು ಕ್ಲಿಕ್ಕಿಸಿದ ಫೋಟೋಗಳಿಗೆ ನವದಂಪತಿ ಖುಷಿಯಾಗಿ ಪೋಸ್ ಕೊಟ್ಟಿದ್ದಾರೆ. ದೀಪಿಕಾ ಅವರ ತಂದೆ ಪ್ರಕಾಶ್ ಪಡುಕೋಣೆ, ತಂಗಿ ಅನಿಷಾ ಹಾಗೂ ರಣ್‍ವೀರ್ ಅವರ ತಂದೆ ಜಗ್ಜೀತ್ ಭಾವ್ನಾನಿ, ತಾಯಿ ಅಂಜು ಮತ್ತು ತಂಗಿ ರಿತಿಕಾ ಕೂಡ ನವಜೋಡಿ ಜೊತೆ ದೇವಸ್ಥಾನಕ್ಕೆ ಬಂದಿದ್ದರು.

ಕಳೆದ ನವೆಂಬರ್ 14 ಮತ್ತು 15 ರಂದು ದೀಪಿಕಾ ರಣ್‍ವೀರ್ ಕೊಂಕಣಿ ಹಾಗೂ ಸಿಂಧ್ ಸಂಪ್ರದಾಯದಂತೆ ಇಟಲಿಯಲ್ಲಿ ವಿವಾಹವಾಗಿದ್ದರು. ಬಳಿಕ ಮೊದಲು ಬೆಂಗಳೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ನಂತರ ನವೆಂಬರ್ 28 ರಂದು ಮುಂಬೈನಲ್ಲಿ ಆರತಕ್ಷತೆ ಮಾಡಿಕೊಂಡಿದ್ದರು. ಆದರೆ ಶನಿವಾರ ಚಿತ್ರರಂಗದ ಸ್ನೇಹಿತರಿಗಾಗಿ ಮತ್ತೊಂದು ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *