ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿ, ಪ್ಲಾಸ್ಟಿಕ್ ಚಂಬು ಹಿಡಿದು ಪ್ರತಿಭಟಿಸಿದ ಗ್ರಾಮಸ್ಥರು

ಬಾಗಲಕೋಟೆ: ಶೌಚಾಲಯ ನಿರ್ಮಾಣದ ಸಹಾಯ ಧನಕ್ಕೆ ಆಗ್ರಹಿಸಿ ಬುದ್ನಿ ಪಿಡಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ಲಾಸ್ಟಿಕ್ ಚಂಬು ಹಿಡಿದು ವಿನೂತನ ಪ್ರತಿಭಟನೆ ಮಾಡಿದ್ದಾರೆ.

ಜಿಲ್ಲಾಡಳಿತ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯ ಧನವನ್ನು ಬಿಡುಗಡೆ ಮಾಡಿರಲಿಲ್ಲ. ಇದರಿಂದ ರೊಚ್ಚಿಗೆದ್ದ ರಬಕವಿ ಬನಹಟ್ಟಿ ತಾಲೂಕಿನ ಬುದ್ನಿ ಪಿಡಿ ಗ್ರಾಮಸ್ಥರು ಜಿಲ್ಲಾಡಳಿತ ಎದುರು ಪ್ಲಾಸ್ಟಿಕ್ ಚಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಸಮಸ್ಯೆ ಬಗೆ ಹರಿಸುವವರೆಗೂ ಸ್ಥಳದಿಂದ ತೆರಳುವುದಿಲ್ಲವೆಂದು ಘೇರಾವ್ ಹಾಕಿದ್ದಾರೆ. ಅಲ್ಲದೇ ಸ್ಥಳದಲ್ಲಿಯೇ ಅಡುಗೆಯನ್ನು ತಯಾರಿಸಿ, ಊಟ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಗ್ರಾಮಸ್ಥರು, ಶೌಚಾಲಯ ನಿರ್ಮಾಣಕ್ಕೆ ಇದೂವರೆಗೂ ಜಿಲ್ಲಾಡಳಿತ ಸಹಾಯ ಧನವನ್ನು ಬಿಡುಗಡೆ ಮಾಡುತ್ತಿಲ್ಲ. ಹಲವು ಬಾರಿ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನಾವು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದೇನೆ. ನಮ್ಮ ಸಮಸ್ಯೆ ಬಗೆಹರಿಯುವವರೆಗೂ ಕದಲುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *