ಪ್ರಸಾದಕ್ಕೆ 10 ಬಾಟಲ್ ವಿಷ ಬೆರೆಸಿದ್ದಾರಾ ದುಷ್ಕರ್ಮಿಗಳು?

ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ದುಷ್ಕರ್ಮಿಗಳು 10ಕ್ಕೂ ಹೆಚ್ಚು ಬಾಟಲ್ ವಿಷ ಬೆರೆಸಿದ್ದರು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸಾವಿರಾರು ಜನರಿಗೆ ತಯಾರಿಸಿದ್ದ ಪ್ರಸಾದದಲ್ಲಿ ಒಂದು ಅಥವಾ ಎರಡು ಬಾಟಲ್ ವಿಷ ಬೆರೆಸಿದ್ದರೆ ವಾಂತಿ, ಭೇದಿ ಮಾತ್ರ ಆಗುತ್ತಿತ್ತು. ಆದರೆ ಹತ್ತಕ್ಕೂ ಹೆಚ್ಚು ಬಾಟಲ್ ಕ್ರಿಮಿನಾಶ ಅಥವಾ ವಿಷ ಬೆರೆಸಿದ್ದ ಪರಿಣಾಮ ಹೆಚ್ಚಿನ ಪ್ರಮಾಣದಲ್ಲಿ ಪ್ರಾಣಹಾನಿಯಾಗಿದೆ. ಪ್ರಸಾದದಲ್ಲಿ ವಿಷದ ಪ್ರಮಾಣ ಹೆಚ್ಚಾಗಿದ್ದರಿಂದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, 11 ಜನ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ಹೇಳಿದ್ದು, ಇಂದು ಸಾವಿನ ಸಂಖ್ಯೆ 18ಕ್ಕೆ ಏರಿದೆ. ಇದನ್ನೂ ಓದಿ: ಪ್ರಸಾದದಲ್ಲಿ ಕೀಟನಾಶಕ ಮಿಶ್ರಣ: ಕೆ.ಆರ್.ಆಸ್ಪತ್ರೆ ವೈದ್ಯರ ಶಂಕೆ

ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಸೌಕರ್ಯಗಳ ಕೊರತೆ ಇದೆ. ಹೀಗಾಗಿ ಮೂವರನ್ನು ಮಾತ್ರ ಇರಿಸಿಕೊಂಡು ಉಳಿದ ಅಸ್ವಸ್ಥರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ದೇವಸ್ಥಾನದ ಸುತ್ತಮುತ್ತ ದನ ಕಾಯುತ್ತಿದ್ದ ಕೆಲವರು ಪ್ರಸಾದ ಸೇವಿಸಿದ್ದಾರೆ. ಹೀಗಾಗಿ ಅವರು ಯಾವ ಗ್ರಾಮದವರು ಅಂತ ಪತ್ತೆ, ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಸುಳ್ವಾಡಿ ಗ್ರಾಮದ ಚಿನ್ನಪ್ಪಿ ಹಾಗೂ ಮಾದೇಶ್ ಎಂಬವರನ್ನು ರಾಮಾಪುರ ಠಾಣಾ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಆದರೆ ತನಿಖೆಯಲ್ಲಿ ಗೌಪ್ಯತೆ ಕಾಪಾಡುವ ಉದ್ದೇಶದಿಂದ ಚಿನ್ನಪ್ಪಿ ಹಾಗೂ ಮಾದೇಶ್ ವಿಷ ಬೆರೆಸಿದ್ದಾರಾ?, ಬೇರೆಯವರು ಹೇಳಿದ್ದರಿಂದ ಕೃತ್ಯ ಎಸಗಿದ್ದಾರಾ? ಎಷ್ಟು ಪ್ರಮಾಣದ ವಿಷ ಬೆರೆಸಿದ್ದರು ಎನ್ನುವ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಪತ್ನಿ ಜೀವ ಉಳಿಸಲು ಬರುವಾಗ ಪತಿ ಸಾವು – ಮುಗಿಲು ಮುಟ್ಟಿದೆ ಮಕ್ಕಳ ಗೋಳು!

https://www.youtube.com/watch?v=31WA3fSlH-I

https://www.youtube.com/watch?v=V_qoMhCwGNs

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *