ತಡರಾತ್ರಿ ಹೊಸ ರಸ್ತೆಗೆ ಕಿಡಿಗೇಡಿಗಳಿಂದ ವಾಮಾಚಾರ

ಬೆಂಗಳೂರು: ಭಾನುವಾರ ತಡರಾತ್ರಿ ಕಿಡಿಗೇಡಿಗಳು ರಸ್ತೆಗೆ ವಾಮಾಚಾರ ಮಾಡಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ.

ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ರಸ್ತೆಯ ಮಧ್ಯೆ ಭಾಗದಲ್ಲಿ ಕೋಳಿ ಬಲಿ ನೀಡಿ ಕುಂಕುಮ ಹೂ ಇಟ್ಟು ವಾಮಾಚಾರ ಮಾಡಿದ್ದಾರೆ. ವಾಮಾಚಾರ ಮಾಡಿದ ರಸ್ತೆಯು ಇತ್ತೀಚೆಗಷ್ಟೇ ಹೊಸದಾಗಿ ನಿರ್ಮಿಸಲಾಗಿತ್ತು. ಈ ಕಾಮಗಾರಿ ವೇಳೆ ಕಂಟ್ರಾಕ್ಟರ್ ಹಾಗೂ ಪಿಡಬ್ಲೂಡಿ ಅಧಿಕಾರಿಗಳ ನಡುವೆ ಗಲಾಟೆ ನಡೆದಿತ್ತು.

ಕಾಮಗಾರಿ ಪರಿಶೀಲನೆ ವೇಳೆ ಗುತ್ತಿಗೆದಾರ ಹಾಗೂ ಆತನ ಬೆಂಬಲಿಗರಿಂದ ಎಇ ಜಯರಾಮಯ್ಯ ಮೇಲೆ ಹಲ್ಲೆಗೂ ಸಹ ಮುಂದಾಗಿದ್ದರು. ನಂತರ ಅಧಿಕಾರಿಗಳು ಗುತ್ತಿಗೆದಾರನ ಮೇಲೆ ಸರ್ಜಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಗುತ್ತಿಗೆದಾರ ಹಾಗೂ ಬೆಂಬಲಿಗರು ರಸ್ತೆಯಲ್ಲಿ ತಡರಾತ್ರಿ ವಾಮಾಚಾರ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *