ನಿರ್ದೇಶಕ ಕಲಾ ಸಾಮ್ರಾಟ್ ಎಸ್. ನಾರಾಯಣ್ ತಾಯಿ ನಿಧನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿರ್ದೇಶಕ ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರ ತಾಯಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಎಸ್. ನಾರಾಯಣ್ ಅವರ ತಾಯಿ ಕಮಲಮ್ಮ(84) ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ 25 ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಕಮಲಮ್ಮ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ನಿಧನರಾಗಿದ್ದಾರೆ. ಕಮಲಮ್ಮ ಅವರ ಅಂತ್ಯಕ್ರಿಯೆಯನ್ನು ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿರುವ ಚಿತಾಗಾರದಲ್ಲಿ ಸಂಜೆ 3ರ ನಂತರ ನೆರವೇರಿಸಲಾಗುತ್ತದೆ ಎಂಬುದು ತಿಳಿದು ಬಂದಿದೆ. ಕಮಲಮ್ಮ ಅವರು ದಿವಂಗತ ಎಸ್. ವರದರಾಜ್ ಅವರ ಪತ್ನಿಯಾಗಿದ್ದು, ಇವರಿಗೆ ಮೂರು ಜನ ಗಂಡು ಮಕ್ಕಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *