ಹೊಯ್ಸಳಕ್ಕೆ ಸ್ವಿಫ್ಟ್ ಕಾರ್ ಡಿಕ್ಕಿ- ಕೂದಲೆಳೆ ಅಂತರದಲ್ಲಿ ಮೂವರು ಪಾರು

– ಸ್ಥಳಕ್ಕೆ ಡಿಸಿಪಿ ಅಣ್ಣಾಮಲೈ ಭೇಟಿ

ಬೆಂಗಳೂರು: ಹೊಯ್ಸಳ ಪೊಲೀಸ್ ವಾಹನಕ್ಕೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆಯೊಂದು ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ.

ಹೊಯ್ಸಳದಲ್ಲಿ ಮೂವರು ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಕುಡಿದ ಅಮಲಿನಲ್ಲಿ ಕಾರಿನ ಚಾಲಕ ಹೊಯ್ಸಳಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರ್ ಡಿಕ್ಕಿ ಹೊಡೆದ ಪರಿಣಾಮ ಹೊಯ್ಸಳ ವಾಹನದಲ್ಲಿದ್ದ ಮೂವರು ಪೊಲೀಸರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂವರು ಪೊಲೀಸರು ಹೊಯ್ಸಳದಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ದೂರು ಬಂದ ಹಿನ್ನೆಲೆ ಕೋಣನಕುಂಟೆ ಕ್ರಾಸ್ ಬಳಿ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಸ್ವಿಫ್ಟ್ ಕಾರ್ ಹಿಂಬದಿಯಿಂದ ವೇಗವಾಗಿ ಬಂದು ಹೊಯ್ಸಳ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ.

ಸ್ವಿಫ್ಟ್ ಕಾರ್ ಚಾಲಕ ಕುಡಿದು ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗುತ್ತಿದೆ. ಮೂವರು ಪೊಲೀಸರು ಕಾರ್ ಡಿಕ್ಕಿಯಿಂದ ಪಾರಾಗಿದ್ದು, ಸ್ವಿಫ್ಟ್ ಕಾರ್ ಚಾಲಕನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *