ಮಾನವೀಯತೆ ಮೆರೆದ ಜೇವರ್ಗಿ ಶಾಸಕ ಅಜಯ್ ಸಿಂಗ್

ಕಲಬುರಗಿ: ಜಿಲ್ಲೆಯ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಮಾನವೀಯತೆ ಮೆರೆದಿದ್ದಾರೆ.

ಅಪಘತಕ್ಕೀಡಾಗಿ ಗಾಯಗೊಂಡು ಕಾರಿನಲ್ಲಿದ್ದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಅಜಯ್ ಸಿಂಗ್ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ಸ್ವತಃ ಅಜಯ್ ಸಿಂಗ್ ಅವರೇ ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಫೋಟೋ ಸಮೇತ ಬರೆದುಕೊಂಡಿದ್ದಾರೆ.

ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದು ಕಾರ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಚಾಲಕ ಇಮಾಮ್ ಅಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಶಾಸಕರು ಬರುತ್ತಿದ್ದರು. ಘಟನೆಯ ಮಾಹಿತಿ ಅರಿತ ಅಜಯ್ ಸಿಂಗ್ ಅವರು ತಮ್ಮ ಕಾರನ್ನು ಘಟನಾ ಸ್ಥಳದ ಸಮೀಪ ನಿಲ್ಲಿಸಿದ್ದಾರೆ. ಬಳಿಕ ಕಾರಿನಿಂದ ಇಳಿದು ಜೆಸಿಬಿ ಮೂಲಕ ಅಪಘಾತಕ್ಕೀಡಾದ ಕಾರನ್ನು ನಿಲ್ಲಿಸಿ, ನಂತರ ಗಾಯಗೊಂಡಿದ್ದ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.

ಗಾಯಾಳು ಇಮಾಮ್ ಅಲಿಯನ್ನ ಜೇವರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *