ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪೊಲೀಸರಿಗೆ ಕುಡುಕರು ಆವಾಜ್ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಇಂದಿರಾನಗರ 100 ಫೀಟ್ ಸುತ್ತಾಮುತ್ತ ಯುವಕರು ಕುಡಿದು ಹೊಸವರ್ಷ ಆಚರಣೆ ಮಾಡಿದ್ದಾರೆ. ಕುಡಿದು ರಸ್ತೆಯಲ್ಲಿ ತೂರಾಡೊದನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸರಿಗೆ ಫುಲ್ ಅವಾಜ್ ಹಾಕಿದ್ದಾರೆ.

ಸಂಭ್ರಮಾಚರಣೆಯ ವೇಳೆ ಕೆಲ ಯುವಕರು ಸಾಕಷ್ಟು ಪಾನಮತ್ತರಾಗಿದ್ದರು. ಪಾನಮತ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಮುನ್ನ ಅವರಲ್ಲಿ ಮನವಿ ಮಾಡಿಕೊಳ್ಳಿ ಅಂತ ಕಮಿಷನರ್ ಪೊಲೀಸ್ ಇಲಾಖೆಗೆ ಸೂಚನೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಪಾನಮತ್ತರನ್ನು ಮನವೊಲಿಸಿ ಮನೆಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದರು.
ಪೊಲೀಸರು ಕೇರಳ ಮೂಲದ ಯುವಕನ ಬಳಿಯೂ ಮನೆಗೆ ಹೋಗುವಂತೆ ಕೇಳಿಕೊಂಡಿದ್ದರು. ಈ ವೇಳೆ ಸಿಟ್ಟಿಗೆದ್ದ ಯುವಕ ಇಂದಿರಾ ನಗರ ಪೊಲೀಸ್ ಇನ್ಸ್ ಪೆಕ್ಟರ್ ರವಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಆದ್ರೆ ಪೊಲೀಸರು ಯುವಕನ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆತ ಕುಡಿದ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಆತನನ್ನು ಮನೆಗೆ ಕಳುಹಿಸಿದ್ದಾರೆ ಅನ್ನೋ ಮಾಹಿತಿ ದೊರೆತಿದೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಳ್ಳರು ಕೂಡ ತಮ್ಮ ಕೈಚಳ ತೋರಿಸಿದ್ದಾರೆ 50ಕ್ಕೂ ಹೆಚ್ಚು ಮೊಬೈಲ್ ಗಳನ್ನು ಖದೀಮರು ಕಳ್ಳತನ ಮಾಡಿದ್ದಾರೆ. ಎಂಜಿ ರೋಡ್ ಹಾಗೂ ಬ್ರಿಗೇಡ್ ರೋಡ್ ನಲ್ಲಿ ಸಾವಿರಾರು ಮಂದಿ ಸೇರಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆಚರಣೆಯ ಮಧ್ಯೆ ಕೆಲ ಪುಂಡರು ತಮ್ಮ ಕೈಚಳಕ ತೋರಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅಶೋಕನಗರ ಪೊಲೀಸ್ ಠಾಣೆಯ ಎದುರು ಮೊಬೈಲ್ ಕಳೆದುಕೊಂಡ ಜನ ಕೇಸ್ ದಾಖಲಿಸಿಲು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply