ಮನೆಯಿಂದ ಹೊರ ಹೋಗ್ತಿದ್ದಂತೆ ಪುನೀತ್‍ರಿಂದ ಎಫ್‍ಬಿ ಲೈವ್

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರು ಐಟಿ ದಾಳಿ ಮುಗಿದ ತಕ್ಷಣ ಮನೆಯಿಂದ ಹೊರ ಬಂದು ಅಭಿಮಾನಿಗಳನ್ನು ಮಾತನಾಡಿಸಿ ಹುಬ್ಬಳ್ಳಿಗೆ ತೆರಳಿದ್ದಾರೆ. ಈ ವೇಳೆ ಕಾರಿನಲ್ಲಿಯೇ ಫೇಸ್‍ಬುಕ್ ಲೈವ್ ಮಾಡಿ ಮಾತನಾಡಿದ್ದಾರೆ.

ನಟ ಪುನೀತ್ ಮನೆಯಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಕೆಲವು ಕ್ಷಣ ಮಾತನಾಡಿದ್ದು, ಐಟಿ ಅಧಿಕಾರಿಗಳು ಬಂದು ಅವರ ಕೆಲಸ ಏನು ಅದನ್ನು ಮಾಡಿದ್ದಾರೆ. ಅವರಿಗೆ ನಾವು ಸಹಕರಿಸಿದ್ದೇವೆ. ಐಟಿ ಅಧಿಕಾರಿಗಳು ತುಂಬಾ ಪ್ರೊಫೆಶನಲ್ ಆಗಿ ಕೆಲಸ ಮಾಡಿದ್ದಾರೆ. ಏನು ತೊಂದರೆ ಆಗಿಲ್ಲ ಎಂದು ಕಾರು ಹತ್ತಿ ಹೊರಟ್ಟಿದ್ದಾರೆ.

ಕಾರ ಹತ್ತಿದ ತಕ್ಷಣ ಪುನೀತ್ ಫೇಸ್‍ಬುಕ್‍ನಲ್ಲಿ ಲೈವ್ ಬಂದು, ಎಲ್ಲರಿಗೂ ನಮಸ್ಕಾರ, ಇಂದು ಸಂಜೆ ನಮ್ಮ ಸಿನಿಮಾ ‘ನಟಸಾರ್ವಭೌಮ’ ಆಡಿಯೋ ರಿಲೀಸ್ ಹುಬ್ಬಳ್ಳಿಯಲ್ಲಿ ಆಗುತ್ತಿದೆ. ಆದ್ದರಿಂದ ನಾವೆಲ್ಲ ಬರುತ್ತಿದ್ದೇವೆ. ನಿಮ್ಮನ್ನು ಅಲ್ಲಿಯೇ ಭೇಟಿ ಮಾಡುತ್ತೇವೆ. ಎಲ್ಲರೂ ಬನ್ನಿ ಕಾರ್ಯಕ್ರಮವನ್ನು ಎಂಜಾಯ್ ಮಾಡಿ” ಎಂದು ಹೇಳಿದ್ದಾರೆ.

ಇಂದು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಸಂಜೆ ಸುಮಾರು 5 ಗಂಟೆಗೆ ಪುನೀತ್ ಅಭಿನಯದ `ನಟಸಾರ್ವಭೌಮ’ ಸಿನಿಮಾದ ಧ್ವನಿಸುರುಳಿ ಬಿಡುಗಡೆಯಾಗುತ್ತಿದೆ. ಪುನೀತ್ ಮನೆಯ ಐಟಿ ದಾಳಿ ಶುಕ್ರವಾರ ರಾತ್ರಿ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮಕ್ಕೆ ಹೋಗಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಪುನೀತ್ ಹುಬ್ಬಳ್ಳಿಗೆ ಹೊರಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *