ಅಪ್ಪನ ಸಂಭ್ರಮಾಚರಣೆಗೆ 8ರ ಬಾಲಕ ಬಲಿ

ನವದೆಹಲಿ: ಸಂಭ್ರಮಾಚರಣೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗನಿಗೆ ಗುಂಡು ಹಾರಿಸಿದ್ದು, ಪರಿಣಾಮ ಮಗ ಸಾವನ್ನಪ್ಪಿರುವ ಘಟನೆ ದೆಹಲಿಯ ಹೊಸ ಉಸ್ಮಾನ್ ಪುರದಲ್ಲಿ ನಡೆದಿದೆ.

ರೆಹನ್(8) ಮೃತ ದುರ್ದೈವಿ. ಆರೋಪಿ ತಂದೆಯನ್ನು ಯಾಸಿನ್ (42) ಎಂದು ಗುರುತಿಸಲಾಗಿದೆ. ಈ ಘಟನೆ 2018ರ ಡಿಸೆಂಬರ್ 31ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಯಾಸಿನ್ ಹೊಸ ವರ್ಷದ ಹಿಂದಿನ ದಿನ ಅಂದರೆ ಡಿಸೆಂಬರ್ 31ರಂದು ರಾತ್ರಿ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಆದರೆ ಅದು ಗಾಳಿಯಲ್ಲಿ ಆಕಸ್ಮಿಕವಾಗಿ ಆತನ ಮಗ ರೆಹನ್ ಬಲ ಕೆನ್ನೆಗೆ ಬಿದ್ದಿದ್ದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿಯೇ ರೆಹನ್ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.

ಹೊಸ ಉಸ್ಮಾನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪೋಲೀಸರು ಬಾಲಕನ ತಂದೆಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಿಜಾಂಶ ತಿಳಿದು ಬಂದಿದೆ ಎಂದು ಉಪ ಜಿಲ್ಲಾಧಿಕಾರಿ ಅತುಲ್ ಕುಮಾರ್ ಠಾಕೂರ್ ಹೇಳಿದ್ದಾರೆ.

ಆರೋಪಿ ತಂದೆ, ತಾನು ಉತ್ತರ ಪ್ರದೇಶದ ಲೋನಿ ನಿವಾಸಿಯಾದ ರವಿ ಕಶ್ಯಪ್ (21) ಎಂಬಾತನಿಂದ ಗನ್ ತೆಗೆದುಕೊಂಡು ಬಂದಿದ್ದು ಎಂದು ಹೇಳಿದ್ದಾನೆ. ಆತ ಸಂಭ್ರಮಾಚರಣೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಆದರೆ ಆಕಸ್ಮಿಕವಾಗಿ ಬುಲೆಟ್ ಅಲ್ಲೆ ಇದ್ದ ಮಗನಿಗೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ತಂದೆಯನ್ನು ಬಂಧಿಸಿದ್ದು ಜೊತೆಗೆ ಗನ್ ನೀಡಿದ್ದ ಕಶ್ಯಪ್ ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *