ಅಮಿತ್ ಶಾ ರಾಜ್ಯ ಪ್ರವಾಸ ರದ್ದು

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ಇದೇ 9 ರಿಂದ ಕೈಗೊಳ್ಳಬೇಕಾಗಿದ್ದ ರಾಜ್ಯ ಪ್ರವಾಸ ರದ್ದಾಗಿದೆ.

ಚಳಿಗಾಲದ ಸಂಸತ್ ಅಧಿವೇಶನದ ಅವಧಿಯ ವಿಸ್ತರಿಸರಣೆ ಆಗಿರುವುದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಪ್ರವಾಸ ರದ್ದಾಗಿದ್ದು, ಸಂಸತ್ ಅಧಿವೇಶನದಲ್ಲಿ ಅಮಿತ್ ಶಾ ಉಪಸ್ಥಿತರಿರುವ ತೀರ್ಮಾನದ ಹಿನ್ನೆಲೆಯಲ್ಲಿ  ಪ್ರವಾಸವನ್ನು ಮುಂದೂಡಲಾಗಿದೆ.

ಈ ಹಿಂದೆ ನಿಗದಿ ಪಡಿಸಿದ್ದಂತೆ ಅಮಿತ್ ಶಾ ಅವರು ತುಮಕೂರಿಗೆ ಆಗಮಿಸಬೇಕಾಗಿತ್ತು. ಇಲ್ಲಿ ಏರ್ಪಡಿಸಲಾಗಿದ್ದ ಪಕ್ಷದ ವಿವಿಧ ಸಭೆಗಳಲ್ಲಿ ಅಮಿತ್ ಶಾ ಪಾಲ್ಗೊಳ್ಳುವವರಿದ್ದರು. ಒಂದೇ ದಿನದಲ್ಲಿ ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹೀಗೆ 5 ಲೋಕಸಭೆ ಕ್ಷೇತ್ರಗಳ ಪ್ರಮುಖರ ಜೊತೆ ವಿಶೇಷ ಸಭೆ ನಿಗಧಿಯಾಗಿತ್ತು. ಈ 5 ಲೋಕಸಭೆ ಕ್ಷೇತ್ರಗಳ ಬೂತ್ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು ವಿಶೇಷ ಸಭೆ ಸೇರಿದಂತೆ, 20 ರಿಂದ 30 ಸಾವಿರ ಪ್ರಮುಖ ಕಾರ್ಯಕರ್ತರ ಜೊತೆ ವಿಶೇಷ ಸಭೆ ನಡೆಸಿ ಚರ್ಚೆ ನಡೆಸುವ ಸಾಧ್ಯತೆ ಇತ್ತು.

ಸದ್ಯ ಮುಂದೂಡಲಾಗಿರುವ ಪ್ರವಾಸವನ್ನು ಅಧಿವೇಶನ ಮುಕ್ತಾಯದ ನಂತರ ದಿನಾಂಕ ನಿಗಧಿ ಮಾಡಲಾಗುವುದು ಎಂದು ಹೇಳಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *