ರಜೆ ನೀಡ್ಬೇಕು ಇಲ್ಲವಾದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿ: ಹಾಸನ ವಿದ್ಯಾರ್ಥಿಗಳು

ಹಾಸನ: ಇಂದು ಹಾಗೂ ನಾಳೆ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಹಲವು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಜೆ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಬಸ್‍ಯಿಲ್ಲದೇ ಪರದಾಡುತ್ತಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಬಂದ್ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲಾ- ಕಾಲೇಜುಗಳಿಗೆ ರಜೆ ನೀಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಶಾಲಾ- ಕಾಲೇಜಿಗಳಿಗೆ ಹೋಗಲು ಬಸ್‍ಯಿಲ್ಲದೇ ಹರಸಾಹಸ ಪಡುತ್ತಿದ್ದಾರೆ. ವಿದ್ಯಾರ್ಥಿಗಳು ಬೇರೆಡೆಯಿಂದ ಹಾಸನ ನಗರಕ್ಕೆ ಬರಲು ಪರದಾಡುತ್ತಿದ್ದಾರೆ.

ನಮಗೆ ರಜೆ ನೀಡಬೇಕು ಇಲ್ಲವಾದಲ್ಲಿ ಸರಿಯಾಗಿ ಬಸ್ ವ್ಯವಸ್ಥೆಯನ್ನು ಮಾಡಬೇಕು. ನಾವು ದೂರದಿಂದ ಶಾಲೆಗಳಿಗೆ ಬರುತ್ತೇವೆ. ನಮಗೆ ಪರೀಕ್ಷೆಗಳಿರುವ ಸಮಯ ಇದು. ದಯವಿಟ್ಟು ನಮಗೆ ತೊಂದರೆ ನೀಡಬೇಡಿ ಎಂದು ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *