ಅಪ್ಪ ಊಟ ಕೊಡು ಎಂದು ಅಳುತ್ತಿದ್ದ ಬಾಲಕಿಯ ರೇಪ್ ಮಾಡಿ ಕೊಲೆಗೈದ್ರು!

ಭುವನೇಶ್ವರ್: ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳಿಗೆ ಕೊನೆಯಿಲ್ಲ ಎಂಬಂತಾಗಿದೆ. ಇದಕ್ಕೆ ಪೂರಕವೆಂಬಂತೆ ಒಡಿಶಾದಲ್ಲಿ 12 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಅತ್ಯಾವಾರವೆಸಗಿ ಕೊಲೆ ಮಾಡಿದ್ದಾರೆ.

ಈ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ಭಾನುವಾರ ನಡೆದಿದೆ. ವರದಿಗಳ ಪ್ರಕಾರ, ಬಾಲಕಿಯ ತಂದೆ ಒಂದು ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಹೀಗಾಗಿ ಬಾಲಕಿ ಅಪ್ಪನ ಅಂಗಡಿ ಬಂದಿದ್ದಳು. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಸಿವಾಗುತ್ತಿದೆ ಊಟ ಹಾಕು ಅಂತ ಅಳುತ್ತಿದ್ದಳು.

ಆದ್ರೆ ಕೆಲ ಹೊತ್ತಿನ ಬಳಿಕ ಬಾಲಕಿ ಪಕ್ಕದಲ್ಲೇ ಇರುವ ದೇವಸ್ಥಾನದ ಸಮೀಪವಿರುವ ಪೊದೆಯಲ್ಲಿ ನಗ್ನವಾಗಿ ಆಕೆಯ ದೇಹದ ಮೇಲೆ ಚೂರಿಯಿಂದ ಇರಿದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಶವ ನೋಡಿದಾಗ ಆಕೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ರೇಪ್ ವಿಚಾರ ಮನೆಯವರಿಗೆ ತಿಳಿಸುತ್ತಾಳೆ ಎಂಬ ಭಯದಿಂದ ಕಾಮುಕರು ಬಾಲಕಿ ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂಬುದಾಗಿ ಶಂಕಿಸಲಾಗಿದೆ.

ಘಟನೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮರಣೋತ್ತರ ಪರೀಕ್ಷೆಗಾಗಿ ಬಾಲಕಿಯ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರಾವಾನಿಸಿದ್ದಾರೆ. ಹೀಗಾಗಿ ಬಾಲಕಿ ಸಾವಿಗೆ ನಿಖರ ಕಾರಣವೇನೆಂದು ಪರೀಕ್ಷೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

ಘಟನೆ ಸಂಬಂಧ ಸ್ಥಳೀಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *