ಪತ್ನಿ, ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ರೈಲಿಗೆ ಜಿಗಿದ.!

ಗಾಂಧಿನಗರ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದು, ಬಳಿಕ ತಾನೂ ರೈಲಿಗೆ ಜಿಗಿದು ಮೃತಪಟ್ಟಿರುವ ಘಟನೆ ಗುಜರಾತಿನ ವಡೋದರದಲ್ಲಿ ನಡೆದಿದೆ.

ಬಲವಂತ್ ರಾಯ್ಪಾಸಿನ್ ಸಿಂಧಾಲ್ ಪತ್ನಿ, ಮಕ್ಕಳ ಮೇಲೆ ಹಲ್ಲೆ ಮಾಡಿ ಮೃತಪಟ್ಟಿದ್ದಾನೆ. ಈತ ಮೊದಲಿಗೆ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಮಕ್ಕಳು ತಾಯಿಯ ರಕ್ಷಣೆಗೆ ಬಂದಿದ್ದಾರೆ. ಆಗ ಇಬ್ಬರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಮೂವರೂ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಪತ್ನಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರು ಮಕ್ಕಳನ್ನು ವಡೋದರದ ಸರ್ ಸಯ್ಯಾಜಿರಾವ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ನಮಗೆ ಆರೋಪಿ ಬಲವಂತ್ ನ ಶವ ಕರ್ಜನ್ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿದೆ. ಆರೋಪಿ ಬಲವಂತ್ ಸ್ಥಳೀಯ ರೈಲಿನ ಮುಂದೆ ಜಿಗಿದು ಮೃತಪಟ್ಟಿದ್ದಾನೆ. ಸ್ಥಳದಲ್ಲಿದ್ದ ಫೋನ್, ಸಿಮ್ ಕಾರ್ಡ್, ಟ್ಯಾಟೊ ಮತ್ತು ಬೈಸಿಕಲ್ ಪತ್ತೆಯಾಗಿದ್ದು, ಅವುಗಳ ಸಹಾಯದಿಂದ ಬಲವಂತ್ ಎಂದು ನಾವು ಗುರುತಿಸಿದ್ದೇವೆ ಅಂತ ಸಬ್ ಇನ್ಸ್ ಪೆಕ್ಟರ್ ಆರ್.ಜಿ ದೇಸಾಯಿ ಹೇಳಿದರು.

ಈ ದಂಪತಿಗೆ ಮದುವೆಯಾಗಿ ಹದಿನೆಂಟು ವರ್ಷ ಕಳೆದಿದೆ. ಆದರೆ ಇವರಿಬ್ಬರ ಮಧ್ಯೆ ಪದೇ ಪದೆ ಜಗಳ ನಡೆಯುತಿತ್ತು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *